ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am