ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm