ಬ್ರೇಕಿಂಗ್ ನ್ಯೂಸ್
29-09-23 07:00 pm Mangalore Correspondent ಕ್ರೈಂ
ಪುತ್ತೂರು, ಸೆ.29: ವಿವಾಹಿತ ಮಹಿಳೆಯ ಜೊತೆ ಸಲುಗೆ ಬೆಳೆಸಿಕೊಂಡಿದ್ದಲ್ಲದೆ, ಆಕೆಯ ಜೊತೆಗೆ ಫೋಟೊ ತೆಗೆದು ಬ್ಲಾಕ್ಮೇಲ್ ನಡೆಸಿರುವ ಘಟನೆ ನಡೆದಿದ್ದು, ಪ್ರಕರಣದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಆರ್ಲಪದವು ನಿವಾಸಿ ಪ್ರಶಾಂತ ಭಟ್ ಮಾಣಿಲ(35) ಬಂಧಿತ ಆರೋಪಿ. ಸುಬ್ರಹ್ಮಣ್ಯದಲ್ಲಿ ಸಾಮಾಜಿಕ ಹಾಗೂ ರಾಜಕೀಯವಾಗಿ ತೊಡಗಿಸಿಕೊಂಡಿದ್ದ ಪ್ರಶಾಂತ ಭಟ್ ವಿರುದ್ಧ ಕಾರವಾರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವಿವಾಹಿತ ಮಹಿಳೆಯೊಬ್ಬರಿಗೆ ಜಾಲತಾಣದಲ್ಲಿ ಪರಿಚಯ ಆಗಿದ್ದ ಪ್ರಶಾಂತ ಭಟ್, ಬಳಿಕ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ.

ಕಳೆದ ಜನವರಿ ತಿಂಗಳಲ್ಲಿ ಶಿರಸಿಗೆ ತೆರಳಿದ್ದ ಪ್ರಶಾಂತ, ಅಲ್ಲಿ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದ. ಅಲ್ಲದೆ, ಸುತ್ತಾಟವನ್ನೂ ಮಾಡಿದ್ದರು. ಈ ವೇಳೆ, ಯುವತಿ ಜೊತೆಗೆ ಫೋಟೊ ತೆಗೆಸಿಕೊಂಡಿದ್ದು ಆನಂತರ ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾನೆ. ಲಾಡ್ಜ್ ನಲ್ಲಿ ತೆಗೆದಿರುವ ಫೋಟೊವನ್ನು ಗಂಡನಿಗೆ ತೋರಿಸುತ್ತೇನೆ, ತಾಯಿಗೆ ಕಳಿಸುತ್ತೇನೆಂದು ಹೇಳಿ ಹಣಕ್ಕಾಗಿ ಬ್ಲಾಕ್ಮೇಲ್ ಆರಂಭಿಸಿದ್ದ. ಮೊಬೈಲಿನಲ್ಲಿ ನಗ್ನವಾಗಿ ದೇಹ ತೋರಿಸುವಂತೆ ಒತ್ತಡ ಹಾಕುತ್ತಿದ್ದ. ಈ ನಡುವೆ, ಪ್ರಶಾಂತ ಭಟ್ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗುತ್ತಿದ್ದು ಹಣ ನೀಡದೇ ಇದ್ದಾಗ ಫೋಟೊಗಳನ್ನು ಯುವತಿಯ ತಾಯಿಗೆ ಕಳಿಸಿದ್ದ.
ಇದರಿಂದ ಬೇಸತ್ತ ಯುವತಿ ಕಾರವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ಪ್ರಶಾಂತ ಭಟ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ. ಪ್ರಶಾಂತ್ ಭಟ್ ಈ ಹಿಂದೆ ಸುಬ್ರಹ್ಮಣ್ಯದಲ್ಲಿ ಮಠದ ವಿರುದ್ಧ ಹೋರಾಟ ನಡೆಸಿದ್ದವರಲ್ಲಿ ಪ್ರಮುಖನಾಗಿದ್ದ.
Mangalore Case filed against former Subramanya gram panchyath member Prashanth Bhat for blackmailing married woman. The accused is identified as Prashant Bhat Manila. The complainant woman was interested in music and used to sing in Clubhouse, an app. She got acquainted with the accused through the app.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm