ಬ್ರೇಕಿಂಗ್ ನ್ಯೂಸ್
29-09-23 07:00 pm Mangalore Correspondent ಕ್ರೈಂ
ಪುತ್ತೂರು, ಸೆ.29: ವಿವಾಹಿತ ಮಹಿಳೆಯ ಜೊತೆ ಸಲುಗೆ ಬೆಳೆಸಿಕೊಂಡಿದ್ದಲ್ಲದೆ, ಆಕೆಯ ಜೊತೆಗೆ ಫೋಟೊ ತೆಗೆದು ಬ್ಲಾಕ್ಮೇಲ್ ನಡೆಸಿರುವ ಘಟನೆ ನಡೆದಿದ್ದು, ಪ್ರಕರಣದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಆರ್ಲಪದವು ನಿವಾಸಿ ಪ್ರಶಾಂತ ಭಟ್ ಮಾಣಿಲ(35) ಬಂಧಿತ ಆರೋಪಿ. ಸುಬ್ರಹ್ಮಣ್ಯದಲ್ಲಿ ಸಾಮಾಜಿಕ ಹಾಗೂ ರಾಜಕೀಯವಾಗಿ ತೊಡಗಿಸಿಕೊಂಡಿದ್ದ ಪ್ರಶಾಂತ ಭಟ್ ವಿರುದ್ಧ ಕಾರವಾರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವಿವಾಹಿತ ಮಹಿಳೆಯೊಬ್ಬರಿಗೆ ಜಾಲತಾಣದಲ್ಲಿ ಪರಿಚಯ ಆಗಿದ್ದ ಪ್ರಶಾಂತ ಭಟ್, ಬಳಿಕ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ.

ಕಳೆದ ಜನವರಿ ತಿಂಗಳಲ್ಲಿ ಶಿರಸಿಗೆ ತೆರಳಿದ್ದ ಪ್ರಶಾಂತ, ಅಲ್ಲಿ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದ. ಅಲ್ಲದೆ, ಸುತ್ತಾಟವನ್ನೂ ಮಾಡಿದ್ದರು. ಈ ವೇಳೆ, ಯುವತಿ ಜೊತೆಗೆ ಫೋಟೊ ತೆಗೆಸಿಕೊಂಡಿದ್ದು ಆನಂತರ ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾನೆ. ಲಾಡ್ಜ್ ನಲ್ಲಿ ತೆಗೆದಿರುವ ಫೋಟೊವನ್ನು ಗಂಡನಿಗೆ ತೋರಿಸುತ್ತೇನೆ, ತಾಯಿಗೆ ಕಳಿಸುತ್ತೇನೆಂದು ಹೇಳಿ ಹಣಕ್ಕಾಗಿ ಬ್ಲಾಕ್ಮೇಲ್ ಆರಂಭಿಸಿದ್ದ. ಮೊಬೈಲಿನಲ್ಲಿ ನಗ್ನವಾಗಿ ದೇಹ ತೋರಿಸುವಂತೆ ಒತ್ತಡ ಹಾಕುತ್ತಿದ್ದ. ಈ ನಡುವೆ, ಪ್ರಶಾಂತ ಭಟ್ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗುತ್ತಿದ್ದು ಹಣ ನೀಡದೇ ಇದ್ದಾಗ ಫೋಟೊಗಳನ್ನು ಯುವತಿಯ ತಾಯಿಗೆ ಕಳಿಸಿದ್ದ.
ಇದರಿಂದ ಬೇಸತ್ತ ಯುವತಿ ಕಾರವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ಪ್ರಶಾಂತ ಭಟ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ. ಪ್ರಶಾಂತ್ ಭಟ್ ಈ ಹಿಂದೆ ಸುಬ್ರಹ್ಮಣ್ಯದಲ್ಲಿ ಮಠದ ವಿರುದ್ಧ ಹೋರಾಟ ನಡೆಸಿದ್ದವರಲ್ಲಿ ಪ್ರಮುಖನಾಗಿದ್ದ.
Mangalore Case filed against former Subramanya gram panchyath member Prashanth Bhat for blackmailing married woman. The accused is identified as Prashant Bhat Manila. The complainant woman was interested in music and used to sing in Clubhouse, an app. She got acquainted with the accused through the app.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm