ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm