ಬ್ರೇಕಿಂಗ್ ನ್ಯೂಸ್
05-10-23 02:27 pm Mangalore Correspondent ಕ್ರೈಂ
ಮಂಗಳೂರು, ಅ.5: ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ ಗಿರಿ(25) ಬಂಧಿತ ಆರೋಪಿಗಳು. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ರೈಲಿನಲ್ಲಿದ್ದ ಇಬ್ಬರು ಯುವಕರ ಬಗ್ಗೆ ಸಂಶಯಗೊಂಡು ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಆಗ ತಮ್ಮ ಕಳ್ಳತನ ಕೃತ್ಯದ ಬಗ್ಗೆ ತಿಳಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದ ಆರ್ ಪಿಎಫ್ ತಂಡ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ.
ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲನ್ನು ಟಾರ್ಗೆಟ್ ಮಾಡಿ ಪ್ರಯಾಣ ಮಾಡುತ್ತಿದ್ದರು. ರಾತ್ರಿ ಮಲಗಿರುತ್ತಿದ್ದ ವೃದ್ಧ ಹಾಗೂ ಮಹಿಳಾ ಪ್ರಯಾಣಿಕರ ಚಿನ್ನಾಭರಣಗಳನ್ನು ದೋಚಲು ಪ್ಲ್ಯಾನ್ ಮಾಡುತ್ತಿದ್ದರು. ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾಗುತ್ತಿದ್ದಂತೆ ಚಿನ್ನಾಭರಣಗಳನ್ನು ಎಳೆದೊಯ್ದು ಬೋಗಿಯಿಂದ ಹೊರಜಿಗಿದು ಪರಾರಿಯಾಗುತ್ತಿದ್ದರು.
ಆರೋಪಿಗಳು ಪಾಲಕ್ಕಾಡ್, ತಿರುವನಂತಪುರಂ ಹಾಗೂ ಮಂಗಳೂರು - ಮುಂಬೈ ನಡುವಿನ ಕೊಂಕಣ ರೈಲ್ವೆಯ ರೈಲಿನಲ್ಲಿ ಹೆಚ್ಚು ಕಳವು ಮಾಡುತ್ತಿದ್ದರು. ರೈಲು ಪ್ರಯಾಣಿಕರಿಂದ ಕದ್ದು ಇರಿಸಿಕೊಂಡಿದ್ದ 125 ಗ್ರಾಂ ಚಿನ್ನಾಭರಣಗಳನ್ನು ರೈಲ್ವೆ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.
Robbers come in fight, loot gold from passengera at train in Mangalore, two arrested by railway police.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm