ಬ್ರೇಕಿಂಗ್ ನ್ಯೂಸ್
05-10-23 02:27 pm Mangalore Correspondent ಕ್ರೈಂ
ಮಂಗಳೂರು, ಅ.5: ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ ಗಿರಿ(25) ಬಂಧಿತ ಆರೋಪಿಗಳು. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ರೈಲಿನಲ್ಲಿದ್ದ ಇಬ್ಬರು ಯುವಕರ ಬಗ್ಗೆ ಸಂಶಯಗೊಂಡು ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಆಗ ತಮ್ಮ ಕಳ್ಳತನ ಕೃತ್ಯದ ಬಗ್ಗೆ ತಿಳಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದ ಆರ್ ಪಿಎಫ್ ತಂಡ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ.

ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲನ್ನು ಟಾರ್ಗೆಟ್ ಮಾಡಿ ಪ್ರಯಾಣ ಮಾಡುತ್ತಿದ್ದರು. ರಾತ್ರಿ ಮಲಗಿರುತ್ತಿದ್ದ ವೃದ್ಧ ಹಾಗೂ ಮಹಿಳಾ ಪ್ರಯಾಣಿಕರ ಚಿನ್ನಾಭರಣಗಳನ್ನು ದೋಚಲು ಪ್ಲ್ಯಾನ್ ಮಾಡುತ್ತಿದ್ದರು. ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾಗುತ್ತಿದ್ದಂತೆ ಚಿನ್ನಾಭರಣಗಳನ್ನು ಎಳೆದೊಯ್ದು ಬೋಗಿಯಿಂದ ಹೊರಜಿಗಿದು ಪರಾರಿಯಾಗುತ್ತಿದ್ದರು.

ಆರೋಪಿಗಳು ಪಾಲಕ್ಕಾಡ್, ತಿರುವನಂತಪುರಂ ಹಾಗೂ ಮಂಗಳೂರು - ಮುಂಬೈ ನಡುವಿನ ಕೊಂಕಣ ರೈಲ್ವೆಯ ರೈಲಿನಲ್ಲಿ ಹೆಚ್ಚು ಕಳವು ಮಾಡುತ್ತಿದ್ದರು. ರೈಲು ಪ್ರಯಾಣಿಕರಿಂದ ಕದ್ದು ಇರಿಸಿಕೊಂಡಿದ್ದ 125 ಗ್ರಾಂ ಚಿನ್ನಾಭರಣಗಳನ್ನು ರೈಲ್ವೆ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.
Robbers come in fight, loot gold from passengera at train in Mangalore, two arrested by railway police.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm