ಬ್ರೇಕಿಂಗ್ ನ್ಯೂಸ್
05-10-23 02:27 pm Mangalore Correspondent ಕ್ರೈಂ
ಮಂಗಳೂರು, ಅ.5: ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ ಗಿರಿ(25) ಬಂಧಿತ ಆರೋಪಿಗಳು. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ರೈಲಿನಲ್ಲಿದ್ದ ಇಬ್ಬರು ಯುವಕರ ಬಗ್ಗೆ ಸಂಶಯಗೊಂಡು ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಆಗ ತಮ್ಮ ಕಳ್ಳತನ ಕೃತ್ಯದ ಬಗ್ಗೆ ತಿಳಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದ ಆರ್ ಪಿಎಫ್ ತಂಡ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ.

ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲನ್ನು ಟಾರ್ಗೆಟ್ ಮಾಡಿ ಪ್ರಯಾಣ ಮಾಡುತ್ತಿದ್ದರು. ರಾತ್ರಿ ಮಲಗಿರುತ್ತಿದ್ದ ವೃದ್ಧ ಹಾಗೂ ಮಹಿಳಾ ಪ್ರಯಾಣಿಕರ ಚಿನ್ನಾಭರಣಗಳನ್ನು ದೋಚಲು ಪ್ಲ್ಯಾನ್ ಮಾಡುತ್ತಿದ್ದರು. ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾಗುತ್ತಿದ್ದಂತೆ ಚಿನ್ನಾಭರಣಗಳನ್ನು ಎಳೆದೊಯ್ದು ಬೋಗಿಯಿಂದ ಹೊರಜಿಗಿದು ಪರಾರಿಯಾಗುತ್ತಿದ್ದರು.

ಆರೋಪಿಗಳು ಪಾಲಕ್ಕಾಡ್, ತಿರುವನಂತಪುರಂ ಹಾಗೂ ಮಂಗಳೂರು - ಮುಂಬೈ ನಡುವಿನ ಕೊಂಕಣ ರೈಲ್ವೆಯ ರೈಲಿನಲ್ಲಿ ಹೆಚ್ಚು ಕಳವು ಮಾಡುತ್ತಿದ್ದರು. ರೈಲು ಪ್ರಯಾಣಿಕರಿಂದ ಕದ್ದು ಇರಿಸಿಕೊಂಡಿದ್ದ 125 ಗ್ರಾಂ ಚಿನ್ನಾಭರಣಗಳನ್ನು ರೈಲ್ವೆ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.
Robbers come in fight, loot gold from passengera at train in Mangalore, two arrested by railway police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm