ಬ್ರೇಕಿಂಗ್ ನ್ಯೂಸ್
05-10-23 10:13 pm HK News Desk ಕ್ರೈಂ
ಉತ್ತರ ಪ್ರದೇಶ, ಅ 05: ಕಾನೂನು ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಸುಲಿಗೆಕೋರರು ಹಿಂಸೆ ಕೊಟ್ಟ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಬಿಹಾರ ಮೂಲದ ಕಾನೂನು ವಿದ್ಯಾರ್ಥಿಗೆ ಕಾಡಿದ ಲೈಂಗಿಕ ಸುಲಿಗೆಕೋರರು ಆತನಿಂದ 77 ಸಾವಿರ ರೂ. ವಸೂಲಿ ಮಾಡಿದ್ದಾರೆ.
ಕಾಲೇಜ್ನ ಹಾಸ್ಟೆಲ್ ರೂಂನಲ್ಲಿ ಇದ್ದ ಕಾನೂನು ವಿದ್ಯಾರ್ಥಿಯ ಮೊಬೈಲ್ಗೆ ಅಪರಿಚಿತ ನಂಬರ್ ಒಂದರಿಂದ ವಿಡಿಯೋ ಕಾಲ್ ಬಂದಿತ್ತು. ಕಾಲ್ ರಿಸೀವ್ ಮಾಡಿದ ಕೂಡಲೇ ಬೆತ್ತಲಾಗಿದ್ದ ಯುವತಿಯೊಬ್ಬಳ ವಿಡಿಯೋ ಕಾಣ ಸಿಕ್ಕಿತ್ತು. ಆ ಯುವತಿಯು ನೀನೂ ಕೂಡಾ ಬೆತ್ತಲಾಗು ಎಂದು ವಿದ್ಯಾರ್ಥಿಗೆ ಪುಸಲಾಯಿಸಿದ್ದಳು. ಯುವತಿಯ ಮಾತಿಗೆ ಮರುಳಾದ ವಿದ್ಯಾರ್ಥಿ ಆಕೆ ಹೇಳಿದಂತೆಯೇ ತಾನೂ ಬೆತ್ತಲಾದ. ಕೇವಲ 30 ಸೆಕೆಂಡ್ನಲ್ಲಿಯೇ ಈ ಕರೆ ಕಡಿತವಾಗಿತ್ತು ಎನ್ನಲಾಗಿದೆ. ಇದಾದ ಕೂಡಲೇ ವಿದ್ಯಾರ್ಥಿಯ ಮೊಬೈಲ್ಗೆ ಬೆದರಿಕೆ ಕರೆ ಬಂತು. ವಿದ್ಯಾರ್ಥಿಗೆ ಕರೆ ಮಾಡಿದ್ದ ಯುವತಿ ಹಣ ಕೊಡು, ಇಲ್ಲವಾದ್ರೆ ನಿನ್ನ ಬೆತ್ತಲೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಮಾಡುತ್ತೇನೆ ಎಂದು ಬೆದರಿಕೆ ಹಾಕಿದಳು ಎನ್ನಲಾಗಿದೆ.
ಯುವತಿಯ ಬೆದರಿಕೆ ಕರೆಯಿಂದಾಗಿ ಕಂಗಾಲಾದ ವಿದ್ಯಾರ್ಥಿ ಕೂಡಲೇ ತನ್ನ ಎರಡು ಬ್ಯಾಂಕ್ ಖಾತೆಗಳಿಂದ ಒಟ್ಟು 77,599 ರೂ.ಗಳನ್ನು ಯುವತಿಯ ಖಾತೆಗೆ ವರ್ಗಾಯಿಸಿದ್ದಾನೆ. ಸೆಂಟ್ರಲ್ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ನ ಎರಡು ಖಾತೆಗಳಿಗೆ ಹಣ ವರ್ಗಾವಣೆ ಮಾಡಿರೋದಾಗಿ ಯುವಕ ಮಾಹಿತಿ ನೀಡಿದ್ದಾನೆ. ಇನ್ನು ಯುವತಿ ತನಗೆ ಕರೆ ಮಾಡಿದ ಮೊಬೈಲ್ ಸಮಖ್ಯೆ ಹನ್ಸ್ರಾಜ್ ಎಂಬುವನಿಗೆ ಸೇರಿದ್ದು ಎಂದು ವಿದ್ಯಾರ್ಥಿ ಪತ್ತೆ ಹಚ್ಚಿದ್ದಾನೆ. ಮತ್ತೊಂದು ನಂಬರ್ನ ಮೂಲ ಗೊತ್ತಾಗಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ವಿಡಿಯೋ ಕರೆ ಬಳಿಕ ವಿದ್ಯಾರ್ಥಿಗೆ ಮೊದಲಿಗೆ ಯುವತಿಯ ಮೊಬೈಲ್ ಕರೆ ಬಂದಿದೆ. ಆಕೆ ವಿಡಿಯೋ ಡಿಲೀಟ್ ಮಾಡಲು 28 ಸಾವಿರ ರೂ. ಕೊಡು ಎಂದು ಬೇಡಿಕೆ ಇಟ್ಟಿದ್ದಾಳೆ. ಆಗ ಯುವಕ ಈ ಬೇಡಿಕೆ ತಿರಸ್ಕರಿಸಿದ್ದಾನೆ. ಹಣ ಕೊಡೋದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಈ ವೇಳೆ ಯುವತಿ ಕರೆ ಕಟ್ ಮಾಡಿದ್ದಾಳೆ. ನಂತರ ಪುರುಷನೊಬ್ಬನ ಮೊಬೈಲ್ ಕರೆ ಬಂದಿದೆ. ಆತ ತನ್ನನ್ನು ತಾನು ದಿಲ್ಲಿಯ ಪೊಲೀಸ್ ಆಯುಕ್ತ ಎಂದು ಪರಿಚಯಿಸಿಕೊಂಡಿದ್ದಾನೆ. ನೀನು ಹಣ ಕೊಡದಿದ್ದರೆ ನಿನ್ನ ಭವಿಷ್ಯವನ್ನೇ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.
ಯುವತಿ ನಿನ್ನ ಜೊತೆ ಬೆತ್ತಲೆಯಾಗಿ ವಿಡಿಯೋ ಸಂಭಾಷಣೆ ಮಾಡಿದ್ದಾಳೆ. ಈ ಸಂಬಂಧ ನಾವು ಎಫ್ಐಆರ್ ದಾಖಲು ಮಾಡಿಕೊಂಡಿದ್ದೇವೆ. ಈಗಾಗಲೇ ವಿಡಿಯೋ ಯೂಟ್ಯೂಬ್ನಲ್ಲಿದೆ. ನೀನು ಹಣ ಕೊಡದೇ ಹೋದರೆ ಈ ವಿಡಿಯೋ ವೈರಲ್ ಆಗುತ್ತದೆ ಎಂದು ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ, ಆತ ದಿಕ್ಕೇ ತೋಚದಂತಾಗಿ ಹಣ ನೀಡಿದ್ದಾನೆ ಎಂದು ಎಫ್ಐಆರ್ನಲ್ಲಿ ನಮೂದಿಸಲಾಗಿದೆ.
Law student blackmailed of naked video record in Uttar Pradesh.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm