ಬ್ರೇಕಿಂಗ್ ನ್ಯೂಸ್
06-10-23 08:52 pm Mangalore Correspondent ಕ್ರೈಂ
ಉಳ್ಳಾಲ, ಅ.6: ಗಣಿತ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಪಡೆದಿದ್ದ ಆರನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಹಪಾಠಿಯೊಂದಿಗೆ ಸೇರಿ ಪೇಪರ್ ತಿದ್ದಿದ ಶಿಕ್ಷಕಿಯ ನೀರಿನ ಬಾಟಲಿಗೆ ಅವಧಿ ಮುಗಿದಿದ್ದ ಮಾತ್ರೆಗಳನ್ನ ಹಾಕಿ ಸೇಡು ತೀರಿಸಿದ್ದರ ಪರಿಣಾಮ ನೀರನ್ನ ಕುಡಿದಿದ್ದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಉಳ್ಳಾಲ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದ್ದು ಘಟನೆಗೆ ಕಾರಣರಾದ ವಿದ್ಯಾರ್ಥಿನಿಯರಿಬ್ಬರಿಗೆ ಟಿಸಿ ನೀಡಲು ಶಾಲಾಡಳಿತ ಮಂಡಳಿ ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
ಶಾಲೆಯಲ್ಲಿ ಯುನಿಟ್ ಟೆಸ್ಟ್ ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಪೇಪರ್ ತಿದ್ದಿದ ಗಣಿತ ಶಿಕ್ಷಕಿ ಸರಿಯಿದ್ದ ಉತ್ತರಕ್ಕೆ ತಪ್ಪು ಹಾಕಿದ್ದಾರೆ ಅನ್ನುವ ಬಾವನೆ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು. ಶಿಕ್ಷಕಿಯ ವಿರುದ್ಧ ಸೇಡು ತೀರಿಸಲು ತನ್ನ ಸಹಪಾಠಿಯ ಸಹಾಯ ಪಡೆದುಕೊಂಡ ವಿದ್ಯಾರ್ಥಿನಿ ಸ್ಟಾಫ್ ರೂಮ್ ನಲ್ಲಿ ಯಾರೂ ಇಲ್ಲದ ಸಂದರ್ಭ ಬಳಸಿಕೊಂಡು ತಾನು ತಂದಿದ್ದ ಅವಧಿ ಮೀರಿದ್ದ ಮಾತ್ರೆಗಳನ್ನ ಗಣಿತ ಶಿಕ್ಷಕಿ ಬಳಸುತ್ತಿದ್ದ ನೀರಿನ ಬಾಟಲಿಗೆ ಹಾಕಿದ್ದಾಳೆ.
ಗಣಿತ ಶಿಕ್ಷಕಿಯು ಬಾಟಲಿ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದು, ಅದೇ ನೀರನ್ನ ಸೇವಿಸಿದ್ದ ಮತ್ತೋರ್ವ ಶಿಕ್ಷಕಿಯ ಮುಖ ಊದಿಕೊಂಡಿದೆ. ಅನುಮಾನಗೊಂಡ ಶಿಕ್ಷಕರು ನೀರಿನ ಬಾಟಲಿಯನ್ನ ಪರಿಶೀಲಿಸಿದಾಗ ನೀರಿನಲ್ಲಿ ಮಾತ್ರೆಗಳು ಕರಗಿರುವುದನ್ನ ಗಮನಿಸಿದ್ದಾರೆ. ಸಿಸಿಟಿವಿ ಪರಿಶೀಲಿಸಿದಾಗ ವಿದ್ಯಾರ್ಥಿನಿಯರ ಕುಕೃತ್ಯ ಬೆಳಕಿಗೆ ಬಂದಿತ್ತು.
ಪ್ರಾಥಮಿಕ ಶಿಕ್ಷಣದಲ್ಲೇ ಕ್ರೌರ್ಯ ತೋರಿದ ವಿದ್ಯಾರ್ಥಿನಿಯರ ನಡೆಗೆ ಶಾಲಾ ರಕ್ಷಕ-ಶಿಕ್ಷಕರು ನಿಬ್ಬೆರಗಾಗಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಗಳು ಶಿಕ್ಷಣವನ್ನು ವ್ಯಾವಹಾರಿಕ ಮತ್ತು ಸ್ಪರ್ಧಾತ್ಮಕ ರೀತಿ ನಡೆಸುತ್ತಿರುವುದು, ಪೋಷಕರು ಮಕ್ಕಳನ್ನ ರ್ಯಾಂಕ್ ಮೆಷಿನ್ ಗಳಂತೆ ಬಿಂಬಿಸುತ್ತಿರುವುದರ ಪರಿಣಾಮ ಇಂತಹ ಕೃತ್ಯಗಳನ್ನ ವಿದ್ಯಾರ್ಥಿಗಳು ನಡೆಸುತ್ತಿದ್ದಾರೆ ಎಂಬ ಕಳವಳ ಉಂಟಾಗಿದೆ. ಕೃತ್ಯವೆಸಗಿದ ವಿದ್ಯಾರ್ಥಿನಿಯರನ್ನು ಶಾಲಾಡಳಿತವು ತರಾತುರಿಯಲ್ಲಿ ಟಿ.ಸಿ ಕೊಟ್ಟು ಡಿಬಾರ್ ಮಾಡಲು ಮುಂದಾಗಿದ್ದು ಆ ಮೂಲಕ ಶಾಲೆಯ ಮಾನ ಕಾಪಾಡಲು ಹೊರಟಿದೆ.
ಪ್ರಕರಣ ಕಾನೂನು ವ್ಯಾಪ್ತಿಗೆ ಬಂದರೆ ಮಾತ್ರ ಕಾನೂನಿನೊಂದಿಗೆ ಸಂಘರ್ಷ ಮೆರೆದ ಅಪ್ರಾಪ್ತ ವಿದ್ಯಾರ್ಥಿನಿಯರನ್ನ ಸಲಹಾ ಕೇಂದ್ರದಲ್ಲಿ ಸಮಾಲೋಚನೆ ನಡೆಸಲು ಸಾಧ್ಯ. ಸದ್ಯ ಪೊಲೀಸ್ ದೂರು ದಾಖಲಾಗಿಲ್ಲ. ಶಿಕ್ಷಣ ಇಲಾಖೆಯೂ ಪ್ರಕರಣವನ್ನು ಗಂಭೀರ ಪರಿಗಣಿಸಿ ವಿಚಾರಣೆ ನಡೆಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.
Mangalore minor student of private School Mix expired tablets into the water bottle of tow teachers for giving less marks in maths exam at Ullal. The teacher is said to be ill. The administration has planned to suspend the student
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm