ಬ್ರೇಕಿಂಗ್ ನ್ಯೂಸ್
08-10-23 04:24 pm Mangalore Correspondent ಕ್ರೈಂ
ಉಳ್ಳಾಲ, ಅ.8: ಜೇಬಲ್ಲಿ ಕವಡೆ ಕಾಸು ಇಲ್ಲದಿದ್ದರೂ ಕೊರಳಿಗೆ ಹೊಳೆಯುವ ಚೈನು, ಕೈಯಲ್ಲಿ ಐಫೋನ್ ಒಂದನ್ನ ಹಿಡಿದರೆ ಸಾಕು.. ಅದೆಲ್ಲ ಅಸಲಿಯೆಂದೇ ಗ್ರಹಿಸಿ ಎಂಥವರೂ ಯಾಮಾರುತ್ತಾರೆ ಎಂಬುದಕ್ಕೆ ತೊಕ್ಕೊಟ್ಟಿನಲ್ಲಿ ಶನಿವಾರ ರಾತ್ರಿ ನಡೆದ ಘಟನೆಯೇ ಸಾಕ್ಷಿಯಾಗಿದೆ.
ಶನಿವಾರ ಸಂಜೆ 7 ಗಂಟೆ ಸುಮಾರಿಗೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಸ್ಸು ತಂಗುದಾಣದ ಬಳಿಯಿರುವ ಅಯ್ಯಂಗಾರ್ ಬೇಕರಿಗೆ ಗ್ರಾಹಕನ ಸೋಗಲ್ಲಿ ಬಂದ ಆಸಾಮಿಯೋರ್ವ ಬೇಕರಿ ಮಾಲೀಕನನ್ನ ಯಾಮಾರಿಸಿ ತುಪ್ಪ, ಸಿಹಿ ತಿಂಡಿಗಳನ್ನ ಸಾಲವಾಗಿ ಖರೀದಿಸಿದ್ದಲ್ಲದೆ, ರವೆ ಲಾಡನ್ನ ಎಗರಿಸಿದ್ದಾನೆ.

ಕೈಯಲ್ಲಿ ಎರಡೆರಡು ಬ್ರೇಸ್ ಲೇಟ್, ಕುತ್ತಿಗೆಯಲ್ಲಿ ದಪ್ಪದ ಎರಡು ಮೂರು ಚೈನ್ ಗಳನ್ನ ಧರಿಸಿ ಬೈಕಲ್ಲಿ ಬಂದಿದ್ದ ಮಧ್ಯ ವಯಸ್ಕ ವ್ಯಕ್ತಿ ಜಾಕೆಟ್ ಹಾಕಿ ಹೆಲ್ಮೆಟನ್ನೂ ತೆಗೆಯದೆ ಬೇಕರಿಯೊಳಗೆ ಸಣ್ಣ ಮೊಬೈಲಲ್ಲಿ ಯಾರಲ್ಲೋ ಮಾತನಾಡುತ್ತಿದ್ದಂತೆ ನಟಿಸಿ ಸುಮಾರು 1,400 ರೂಪಾಯಿಗಳ ತಿಂಡಿ, ತಿನಿಸುಗಳನ್ನ ಖರೀದಿಸಿದ್ದ. ತನ್ನ ಹೆಸರನ್ನು ನಿತಿನ್ ಶೆಟ್ಟಿ ಎಂದು ಬೇಕರಿ ಮಾಲಕ ನವೀನ್ ಅವರಲ್ಲಿ ಪರಿಚಯಿಸಿಕೊಂಡಿದ್ದಾನೆ. ತನ್ನಲ್ಲಿ ಕ್ಯಾಷ್ ಇಲ್ಲ, ಗೂಗಲ್ ಪೇ ಮಾಡಲು ಐಫೋನ್ ಆಫ್ ಆಗಿದೆ. ಈಗಲೇ ಹಣ ತಂದು ಕೊಡುವುದಾಗಿ ಹೇಳಿ ಮೊಬೈಲ್ ನಂಬರನ್ನ ನೀಡಿದ್ದಾನೆ. ಆಸಾಮಿಯನ್ನ ನಂಬಿದ ಮಾಲಕ ಸಿಹಿತಿಂಡಿಗಳನ್ನ ನೀಡಿದ್ದಾರೆ.


ಬೇಕರಿಯಿಂದ ಹೊರಟ ಆಸಾಮಿ ಪಕ್ಕದ ಸಣ್ಣ ದಿನಸಿ ಅಂಗಡಿಗೂ ಹೋಗಿದ್ದು ಮಾಲಕಿ ಪೂರ್ಣಿಮ ಅವರಲ್ಲಿ ತುಪ್ಪ, ತೆಂಗಿನಕಾಯಿ ಸೇರಿದಂತೆ 850 ರೂ. ದಿನಸಿ ಸಾಮಾನನ್ನು ಖರೀದಿಸಿದ್ದಾನೆ. ತನ್ನಲ್ಲಿದ್ದ 1,500 ರೂ. ಹಣವನ್ನ ಬೇಕರಿಗೆ ನೀಡಿದೆ. ಐಫೋನ್ ಆಫ್ ಆಗಿದೆ ಎಂದು ಹೇಳಿದ ಅಪರಿಚಿತ ವ್ಯಕ್ತಿ ಇಲ್ಲಿಯೂ ಮಾಲಕಿಯನ್ನ ಯಾಮಾರಿಸಿ ಮೊಬೈಲ್ ನಂಬರ್ ನೀಡಿ ಕಾಲ್ಕಿತ್ತಿದ್ದಾನೆ. ಅಪರಿಚಿತನ ಮೈಯಲ್ಲಿದ್ದ ಬಂಗಾರ, ಕೈಯಲ್ಲಿದ್ದ ಐಪೋನ್ ನಂಬಿ ಸಾಲ ನೀಡಿದ್ದ ಮಹಿಳೆ ಆತ ನೀಡಿದ್ದ ನಂಬರಿಗೆ ರಾತ್ರಿ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ತಕ್ಷಣ ಪಕ್ಕದ ಬೇಕರಿಗೆ ಬಂದು ಸಾಮಾನು ಖರೀದಿಸಿದ ವ್ಯಕ್ತಿ ಪರಿಚಯದವರೇ ಎಂದು ಮಾಲೀಕರಲ್ಲಿ ಕೇಳಿದಾಗ ಅಲ್ಲಿಯೂ ಯಾಮಾರಿಸಿದ ವಿಷಯ ತಿಳಿದುಬಂದಿತ್ತು. ಅಂಗಡಿ ಹಾಗೂ ಬೇಕರಿ ಮಾಲೀಕರಿಗೆ ತಾವು ಮೋಸ ಹೋಗಿರುವುದು ಮನವರಿಕೆ ಆಗಿದೆ.
ಬೇಕರಿಯ ಸಿಸಿಟಿವಿಯಲ್ಲಿ ಅಪರಿಚಿತ ವ್ಯಕ್ತಿ ರವೆ ಲಾಡು ಎಗರಿಸಿದ ದೃಶ್ಯ ರೆಕಾರ್ಡ್ ಆಗಿದ್ದು ಹೆಲ್ಮೆಟ್ ಧರಿಸಿದ್ದ ಕಾರಣ ಗುರುತು ಪತ್ತೆ ಕಷ್ಟವಾಗಿದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಲ್ಲಿ ವ್ಯವಹರಿಸುವಾಗ ಅಂಗಡಿ ಮಾಲೀಕರು ಜಾಗರೂಕರಾಗಿದ್ದರೆ ಒಳ್ಳೆಯದು ಎನ್ನುವ ಸಂದೇಶ ಇದರಿಂದ ಸಿಕ್ಕಿದೆ.
Ullal Bakery owner cheated by Man posing as rich man with iphone and gold of 1400 Rs in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm