ಬ್ರೇಕಿಂಗ್ ನ್ಯೂಸ್
09-10-23 09:44 pm Bangalore Correspondent ಕ್ರೈಂ
ಬೆಂಗಳೂರು, ಅ.9: ರಾಜ್ಯದಲ್ಲಿ ಸಿಡಿ ರಾಜಕಾರಣ ಮತ್ತೆ ತಲೆ ಎತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಸಾಕಷ್ಟು ಮಂದಿಯ ವಿರುದ್ಧ “ಸಿಡಿ” ಪ್ರಕರಣದ ಸುದ್ದಿಗಳು ಕೇಳಿಬಂದಿದ್ದವು. ಕೆಲವು ಬಿಡುಗಡೆಯೂ ಆಗಿದ್ದಲ್ಲದೆ, ಅವುಗಳನ್ನು ಫೇಕ್ ಎಂದೂ ಹೇಳಲಾಗಿತ್ತು. ಆದರೆ, ಈಗ ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಸಿಡಿ ಲೇಡಿ ಪ್ರತ್ಯಕ್ಷವಾಗಿದ್ದಾರೆ. ಅವರು ಮಾಜಿ ಸಚಿವ, ಶಾಸಕ ಮುನಿರತ್ನ ವಿರುದ್ಧ ನೇರ ಆರೋಪ ಮಾಡಿದ್ದು, ಸ್ಫೋಟಕ ಸಂಗತಿಗಳ ಬಗ್ಗೆ ಬಿಚ್ಚಿಟ್ಟಿದ್ದಾರೆ. ತಮ್ಮಿಂದ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಅಲ್ಲದೆ, ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಆರ್. ಆರ್. ನಗರ ಶಾಸಕರಾಗಿರುವ ಮಾಜಿ ಸಚಿವ ಮುನಿರತ್ನ ವಿರುದ್ಧ ಈಗ ಗಂಭೀರ ಆರೋಪವೊಂದು ಕೇಳಿಬಂದಿದೆ. ಮಹಿಳೆಯೊಬ್ಬರು ಹನಿಟ್ರ್ಯಾಪ್ ಆರೋಪ ಮಾಡಿದ್ದಾರೆ. ಈ ಮೂಲಕ ಕರ್ನಾಟಕ ರಾಜಕೀಯದಲ್ಲಿ ಹೊಸ ಸಿಡಿ ಲೇಡಿ ಪ್ರತ್ಯಕ್ಷವಾದಂತೆ ಆಗಿದೆ.

ನನ್ನ ಜೀವನದ ಅಧೋಗತಿಗೆ ಕಾರಣವೇ ಮಿಸ್ಟರ್ ಮುನಿರತ್ನ. ಎಲ್ಲ ಪ್ಲ್ಯಾನ್ ಮಾಡಿ ಎಕ್ಸಿಕ್ಯೂಟ್ ಮಾಡಿದ್ದೇ ಮುನಿರತ್ನ. ಅದಕ್ಕೋಸ್ಕರವೇ ನನ್ನ ಹೋರಾಟ. ಇದು ಅಂತ್ಯವಾಗಲೇಬೇಕು. ಬೇರೆ ಯಾವ ಹೆಣ್ಣು ಮಕ್ಕಳಿಗೂ ಈ ಸ್ಥಿತಿ ಬರಬಾರದು ಎಂದು ಸಿಡಿ ಲೇಡಿ ವಿಡಿಯೊ ಮೂಲಕ ಗುಡುಗಿದ್ದಾರೆ.
"ಒಕ್ಕಲಿಗರು ರಾಜರಾಜೇಶ್ವರಿ ನಗರ” ಎಂಬ ಫೇಸ್ಬುಕ್ ಪೇಜ್ನಲ್ಲಿ ಮಹಿಳೆ ಪ್ರತ್ಯಕ್ಷವಾಗಿದ್ದು, ಮಾಜಿ ಸಚಿವ ಮುನಿರತ್ನ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ. “ನನ್ನ ಜೀವನದ ದುರಂತಕ್ಕೆ ಮುನಿರತ್ನ ಅವರೇ ಹೊಣೆ. ಯಾವ ಕಾರಣಕ್ಕೂ ಈ ಹೋರಾಟ ಕೈ ಬಿಡಲ್ಲ. ಮುನಿರತ್ನ ಅವರ ಹನಿಟ್ರ್ಯಾಪ್ ದಂಧೆ ಬಯಲಿಗೆ ಎಳೆಯುತ್ತೇನೆ” ಎಂದು ಹೇಳಿದ್ದಾರೆ.
ನನ್ನನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಮಾಡಿಸಿದ್ದಾರೆ. ಅಲ್ಲದೆ, ಮದುವೆ ಆಗುತ್ತೇನೆ ಎಂದು ಮುನಿರತ್ನ ನನಗೆ ಮೋಸ ಮಾಡಿದ್ದಾರೆ. ಅವರ ಮೇಲೆ ನಂಬಿಕೆ ಮೇಲೆ ನಾನು ಜತೆಗೆ ಹೋಗಿದ್ದೆ. ಆದರೆ, ಆ ನಂಬಿಕೆಗೆ ಅವರು ದ್ರೋಹ ಮಾಡಿದ್ದಾರೆ ಎಂದು ಆರೋಪ ಮಾಡಿರುವ ಮಹಿಳೆ ತಮ್ಮ ಕೈಯಲ್ಲಿ ಒಂದು ದಾಖಲೆ ಮಾದರಿಯಲ್ಲಿ ಫೈಲ್ ಅನ್ನು ಇಟ್ಟುಕೊಂಡಿದ್ದಾರೆ. ಆದರೆ, ಅದರ ಪ್ರದರ್ಶನವನ್ನು ಮಾತ್ರ ಮಾಡಿಲ್ಲ. ಜತೆಗೆ ತಾನು ಯಾರು? ಮುಂದೇನು ಮಾಡುತ್ತೇನೆ ಎಂಬುದನ್ನೂ ಹೇಳಿಲ್ಲ. ಪೊಲೀಸ್ ಠಾಣೆಗೆ ಹೋಗುವ ಬಗ್ಗೆಯೂ ಪ್ರಸ್ತಾಪ ಮಾಡಿಲ್ಲ. ಆ ಮಹಿಳೆ ತಮ್ಮ ಗುರುತನ್ನು ಮರೆಮಾಚಿಕೊಂಡು ವಿಡಿಯೊ ಮಾಡಿ ಅಪ್ಲೋಡ್ ಮಾಡಿದ್ದಾರೆ.
Bangalore R R Nagar MLA Munirathna alleged of Honey trap, woman shares video of being cheated of marriage.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm