ಬ್ರೇಕಿಂಗ್ ನ್ಯೂಸ್
09-10-23 09:44 pm Bangalore Correspondent ಕ್ರೈಂ
ಬೆಂಗಳೂರು, ಅ.9: ರಾಜ್ಯದಲ್ಲಿ ಸಿಡಿ ರಾಜಕಾರಣ ಮತ್ತೆ ತಲೆ ಎತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಸಾಕಷ್ಟು ಮಂದಿಯ ವಿರುದ್ಧ “ಸಿಡಿ” ಪ್ರಕರಣದ ಸುದ್ದಿಗಳು ಕೇಳಿಬಂದಿದ್ದವು. ಕೆಲವು ಬಿಡುಗಡೆಯೂ ಆಗಿದ್ದಲ್ಲದೆ, ಅವುಗಳನ್ನು ಫೇಕ್ ಎಂದೂ ಹೇಳಲಾಗಿತ್ತು. ಆದರೆ, ಈಗ ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಸಿಡಿ ಲೇಡಿ ಪ್ರತ್ಯಕ್ಷವಾಗಿದ್ದಾರೆ. ಅವರು ಮಾಜಿ ಸಚಿವ, ಶಾಸಕ ಮುನಿರತ್ನ ವಿರುದ್ಧ ನೇರ ಆರೋಪ ಮಾಡಿದ್ದು, ಸ್ಫೋಟಕ ಸಂಗತಿಗಳ ಬಗ್ಗೆ ಬಿಚ್ಚಿಟ್ಟಿದ್ದಾರೆ. ತಮ್ಮಿಂದ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಅಲ್ಲದೆ, ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಆರ್. ಆರ್. ನಗರ ಶಾಸಕರಾಗಿರುವ ಮಾಜಿ ಸಚಿವ ಮುನಿರತ್ನ ವಿರುದ್ಧ ಈಗ ಗಂಭೀರ ಆರೋಪವೊಂದು ಕೇಳಿಬಂದಿದೆ. ಮಹಿಳೆಯೊಬ್ಬರು ಹನಿಟ್ರ್ಯಾಪ್ ಆರೋಪ ಮಾಡಿದ್ದಾರೆ. ಈ ಮೂಲಕ ಕರ್ನಾಟಕ ರಾಜಕೀಯದಲ್ಲಿ ಹೊಸ ಸಿಡಿ ಲೇಡಿ ಪ್ರತ್ಯಕ್ಷವಾದಂತೆ ಆಗಿದೆ.
ನನ್ನ ಜೀವನದ ಅಧೋಗತಿಗೆ ಕಾರಣವೇ ಮಿಸ್ಟರ್ ಮುನಿರತ್ನ. ಎಲ್ಲ ಪ್ಲ್ಯಾನ್ ಮಾಡಿ ಎಕ್ಸಿಕ್ಯೂಟ್ ಮಾಡಿದ್ದೇ ಮುನಿರತ್ನ. ಅದಕ್ಕೋಸ್ಕರವೇ ನನ್ನ ಹೋರಾಟ. ಇದು ಅಂತ್ಯವಾಗಲೇಬೇಕು. ಬೇರೆ ಯಾವ ಹೆಣ್ಣು ಮಕ್ಕಳಿಗೂ ಈ ಸ್ಥಿತಿ ಬರಬಾರದು ಎಂದು ಸಿಡಿ ಲೇಡಿ ವಿಡಿಯೊ ಮೂಲಕ ಗುಡುಗಿದ್ದಾರೆ.
"ಒಕ್ಕಲಿಗರು ರಾಜರಾಜೇಶ್ವರಿ ನಗರ” ಎಂಬ ಫೇಸ್ಬುಕ್ ಪೇಜ್ನಲ್ಲಿ ಮಹಿಳೆ ಪ್ರತ್ಯಕ್ಷವಾಗಿದ್ದು, ಮಾಜಿ ಸಚಿವ ಮುನಿರತ್ನ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ. “ನನ್ನ ಜೀವನದ ದುರಂತಕ್ಕೆ ಮುನಿರತ್ನ ಅವರೇ ಹೊಣೆ. ಯಾವ ಕಾರಣಕ್ಕೂ ಈ ಹೋರಾಟ ಕೈ ಬಿಡಲ್ಲ. ಮುನಿರತ್ನ ಅವರ ಹನಿಟ್ರ್ಯಾಪ್ ದಂಧೆ ಬಯಲಿಗೆ ಎಳೆಯುತ್ತೇನೆ” ಎಂದು ಹೇಳಿದ್ದಾರೆ.
ನನ್ನನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಮಾಡಿಸಿದ್ದಾರೆ. ಅಲ್ಲದೆ, ಮದುವೆ ಆಗುತ್ತೇನೆ ಎಂದು ಮುನಿರತ್ನ ನನಗೆ ಮೋಸ ಮಾಡಿದ್ದಾರೆ. ಅವರ ಮೇಲೆ ನಂಬಿಕೆ ಮೇಲೆ ನಾನು ಜತೆಗೆ ಹೋಗಿದ್ದೆ. ಆದರೆ, ಆ ನಂಬಿಕೆಗೆ ಅವರು ದ್ರೋಹ ಮಾಡಿದ್ದಾರೆ ಎಂದು ಆರೋಪ ಮಾಡಿರುವ ಮಹಿಳೆ ತಮ್ಮ ಕೈಯಲ್ಲಿ ಒಂದು ದಾಖಲೆ ಮಾದರಿಯಲ್ಲಿ ಫೈಲ್ ಅನ್ನು ಇಟ್ಟುಕೊಂಡಿದ್ದಾರೆ. ಆದರೆ, ಅದರ ಪ್ರದರ್ಶನವನ್ನು ಮಾತ್ರ ಮಾಡಿಲ್ಲ. ಜತೆಗೆ ತಾನು ಯಾರು? ಮುಂದೇನು ಮಾಡುತ್ತೇನೆ ಎಂಬುದನ್ನೂ ಹೇಳಿಲ್ಲ. ಪೊಲೀಸ್ ಠಾಣೆಗೆ ಹೋಗುವ ಬಗ್ಗೆಯೂ ಪ್ರಸ್ತಾಪ ಮಾಡಿಲ್ಲ. ಆ ಮಹಿಳೆ ತಮ್ಮ ಗುರುತನ್ನು ಮರೆಮಾಚಿಕೊಂಡು ವಿಡಿಯೊ ಮಾಡಿ ಅಪ್ಲೋಡ್ ಮಾಡಿದ್ದಾರೆ.
Bangalore R R Nagar MLA Munirathna alleged of Honey trap, woman shares video of being cheated of marriage.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm