ಬ್ರೇಕಿಂಗ್ ನ್ಯೂಸ್
06-08-20 08:51 am Headline Karnataka News Network ಕ್ರೈಂ
ಮುಂಬೈ: ಬಾಲಿವುಡ್ ಕಿರುತೆರೆಯ ಪ್ರತಿಭಾನ್ವಿತ ನಟ ಸಮೀರ್ ಶರ್ಮಾ (44) ತಮ್ಮ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಶರ್ಮಾ ಮುಂಬೈನ ಪಶ್ಚಿಮ ಮಲಾಡ್ನ ರಸ್ತೆಯಲ್ಲಿರುವ ನೇಹಾ ಸಿಹೆಚ್ಎಸ್ ಬಿಲ್ಡಿಂಗ್ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ಆದರೆ ಬುಧವಾರ ರಾತ್ರಿ ಫ್ಲ್ಯಾಟ್ನ ಅಡುಗೆ ಮನೆಯಲ್ಲಿ ನೇಣು ಬಿಗಿದ ಸೀತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ನಿವಾಸಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಸಮೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವನ್ನಪ್ಪಿದ ಎರಡು ದಿನ ಮೇಲಾಗಿದ್ದರಿಂದ ಶವ ಕೊಳೆಯಲಾರಂಭಿಸಿತ್ತು.
ಕಳೆದ ಫೆಬ್ರವರಿಯಲ್ಲಿ ಅವರು ಈ ಅಪಾರ್ಟ್ಮೆಂಟ್ಅನ್ನು ಬಾಡಿಗೆಗೆ ಪಡೆದಿದ್ದರು. ಸಮೀರ್ ದೇಹದ ಸ್ಥಿತಿಯನ್ನು ನೋಡಿದರೆ ಅವರು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದು, ಸಮೀರ್ ಮನೆಯಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ನೆರೆಹೊರೆಯವರ ಪ್ರಕಾರ ಸಮೀರ್ ಕಳೆದ ಕೆಲ ದಿನಗಳಿಂದ ಒಂಟಿಯಾಗಿರುತ್ತಿದ್ದರು. ಹೊರಗಡೆ ಹೆಚ್ಚು ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸಮೀರ್ ಸೂಪರ್ ಹಿಟ್ ಧಾರಾವಾಹಿಗಳಾದ ‘ದಿಲ್ ಕ್ಯಾ ಚಾಹ್ತಾ’, ‘ಕಹಾನಿ ಘರ್ ಘರ್ ಕೀ’, ‘ಸಾಸ್ ಕಭೀ ಬಹು ಥೀ’ ಗಳಲ್ಲಿ ನಟಿಸಿದ್ದರು. ‘ಯೇ ರಿಶ್ತೆ ಹೈ ಪ್ಯಾರ್ ಕೇ’ ಧಾರಾವಾಹಿಯ ಶೌರ್ಯ ಪಾತ್ರ ಸಮೀರ್ ಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿತ್ತು.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm