ಬ್ರೇಕಿಂಗ್ ನ್ಯೂಸ್
16-10-23 10:54 pm Mangalore Correspondent ಕ್ರೈಂ
ಮಂಗಳೂರು, ಅ.16: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಮೂಡುಬಿದ್ರೆ ಪೊಲೀಸರು ಪ್ರತ್ಯೇಕ ಎರಡು ಕಡೆ ದಾಳಿ ನಡೆಸಿದ್ದು ಇಬ್ಬರು ದಲ್ಲಾಳಿ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸೋಮವಾರ ಸಂಜೆ ಆರು ಗಂಟೆಗೆ ಮಾರ್ಪಾಡಿ ಗ್ರಾಮದ ಒಂಟಿಕಟ್ಟೆ ಎಂಬಲ್ಲಿರುವ ಕಡಲಕೆರೆ ಪಾರ್ಕ್ ನಲ್ಲಿ ಸುಖೇಶ್ ಆಚಾರ್ಯ ಎಂಬಾತ ಪುರಂದರ್ ಎಂಬಾತನಿಂದ ಹಣವನ್ನು ಪಡೆದು allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿ ಸುಖೇಶ್ ಆಚಾರ್ಯ ಎಂಬಾತನನ್ನು ವಶಕ್ಕ ಪಡೆದಿದ್ದಾರೆ. ಈ ವೇಳೆ, ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಮಾಡಲು ಅವರಿಂದ ಹಣವನ್ನು ಪಡೆದು ಬೆಟ್ಟಿಂಗ್ ಆಡುತ್ತಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, allpaanel.com/m/home ಎಂಬ ವೆಬ್ ಸೈಟ್ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾನೆ.

ಆರೋಪಿ ಸುಖೇಶ್ ಆಚಾರ್ಯ ಬಳಿಯಿದ್ದ ಮೋಬೈಲ್ ನ ಗೂಗಲ್ ಕ್ರೋಮ್ ನಲ್ಲಿ allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಹಣವನ್ನು ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್ ಗೆ ತೊಡಗಿಸಿಕೊಂಡಿರುವುದು ಕಂಡುಬಂದಿದೆ. ವಿಶ್ವಕಪ್ ಕೂಟದಲ್ಲಿ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ನಡೆದಿದ್ದು ಈ ಮ್ಯಾಚ್ ಗಾಗಿ ಹಣವನ್ನು ಬೆಟ್ಟಿಂಗ್ ಹಾಕುವ ಗಿರಾಕಿಗಳಿಗಾಗಿ ಕಾಯುತ್ತಿದ್ದುದಾಗಿ ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ 158/2023 ಕಲಂ: 78(3)(4) ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಕಾನೂನು ಕ್ರಮ ಜರುಗಿಸಲಾಗಿದೆ.
ಆರೋಪಿ ಸುಖೇಶ್ ಆಚಾರ್ಯ ಅಲಂಗಾರು ನಿವಾಸಿಯಾಗಿದ್ದು ಆತನ ಜೊತೆಗೆ ಹಣ ತೊಡಗಿಸಿದ್ದ ಪುರಂದರ ಕುಲಾಲ್ ಪುತ್ತಿಗೆ ಗ್ರಾಮದ ನಿವಾಸಿ. ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ಸಿದ್ದಪ್ಪ ನರನೂರ ಹಾಗೂ ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ಝೈದ್, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮತ್ತೊಂದು ಬೆಟ್ಟಿಂಗ್ ಏಪ್ ನಲ್ಲಿ ದಂಧೆ ಪತ್ತೆ
ಮತ್ತೊಂದು ಪ್ರಕರಣದಲ್ಲಿ ಮೂಡಬಿದರೆಯ ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿ ಎಸ್.ಐ ಸ್ಪೋರ್ಟ್ಸ್ ಅಂಗಡಿಯ ಮುಂಭಾಗದಲ್ಲಿ ನವೀದ್ ಎಂಬಾತ ಪ್ರಸಾದ್ ಮತ್ತು ಉಮೇಶ್ ಎಂಬವರಿಂದ ಹಣವನ್ನು ಪಡೆದು Comfort Zone 247 ಎಂಬ ಮೊಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮೂವರನ್ನೂ ಬಂಧಿಸಿದ್ದಾರೆ. ವಿಚಾರಣೆ ವೇಳೆ ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಮಾಡಲು ಹಣವನ್ನು ಗೂಗಲ್ ಪೇ ಅಥವಾ ಪೋನ್ ಪೇ ಮುಖೇನ ಪಡೆಯುವುದಾಗಿ ತಿಳಿಸಿದ್ದಾರೆ. Comfort Zone 24*7 ಎಂಬ ವೆಬ್ ಸೈಟ್ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ 157/2023 ಕಲಂ: 78(3)(4) ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಕ್ರಮ ಜರುಗಿಸಲಾಗಿದೆ.
ಬೆಳುವಾಯಿ ನಿವಾಸಿ ನವೀದ್(30), ಪಡುಮಾರ್ನಾಡು ನಿವಾಸಿಗಳಾದ ಉಮೇಶ್ (40), ಪ್ರಸಾದ್ ದೇವಾಡಿಗ (35) ಬಂಧಿತರು. ಈ ಕಾರ್ಯಾಚರಣೆಯಲ್ಲಿ ಮೂಡಬಿದ್ರೆ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಸಿಬ್ಬಂದಿಗಳಾದ ಚಂದ್ರಹಾಸ್ ರೈ, ಮೊಹಮ್ಮದ್ ಹುಸೇನ್, ಅಖೀಲ್ ಅಹ್ಮದ್ ಹಾಗೂ ಅವರ ತಂಡ ಪಾಲ್ಗೊಂಡಿತ್ತು.
Moodbidri five arrested for online cricket betting by Mangalore Police. Acting on a verified tip-off, Naveed was found accepting money from Prasad and Umesh for cricket betting on the mobile platform ‘Comfort Zone 247’.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm