ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm