ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm