ಬ್ರೇಕಿಂಗ್ ನ್ಯೂಸ್
19-10-23 05:02 pm HK News Desk ಕ್ರೈಂ
ಮೈಸೂರು, ಅ.19: ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಮಾಕೋಡು ಗ್ರಾಮದ ಗಣೇಶ್ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್ನನ್ನು ಬಂಧಿಸಿದ್ದಾರೆ.
2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಪುತ್ರಿಯರು ಇದ್ದರು. ಬಳಿಕ ಲಕ್ಷ್ಮಿ ಮತ್ತೊಂದು ಗಂಡು ಮಗುವಿಗೆ ಜನ್ಮ ನೀಡಿ ಇಹಲೋಕ ತ್ಯಜಿಸಿದರು. ನಂತರ ಗಣೇಶ್ ದೇವನಹಳ್ಳಿಯಿಂದ ತಮ್ಮ ಸ್ವಗ್ರಾಮ ಪಿರಿಯಾಪಟ್ಟಣದ ಮಾಕೋಡಿಗೆ ಬಂದು ವಾಸಿಸಲು ಆರಂಭಿಸಿದ್ದರು. ಈ ವೇಳೆ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಅತ್ತೆಯ ಬಳಿಯೇ ಬಿಟ್ಟು ಬಂದಿದ್ದರು. ಆದರೆ ಒಂದೂವರೆ ವರ್ಷದ ಮಗನನ್ನು ತನ್ನ ಬಳಿ ಇಟ್ಟುಕೊಂಡಿದ್ದರು. ಈ ವೇಳೆ ಮಗ ತುಂಬಾ ಅಳುತ್ತಿದ್ದ. ಈ ಹಿನ್ನೆಲೆ ಮಗನನ್ನು ಸಾಕಲಾಗದೇ ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.
ಘಟನೆ ಸಂಬಂಧ ಗಣೇಶ್ ಅವರ ಅತ್ತೆ ಅಂಜನಮ್ಮ ಪಿರಿಯಾಪಟ್ಟಣ ಪೊಲೀಸರಿಗೆ ಗಣೇಶ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಗಣೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಣೇಶ್, ತನ್ನ ತಾಯಿ ಮತ್ತು ಅತ್ತೆ ಮಗುವನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಅದು ಸದಾ ಅಳುತ್ತಿತ್ತು. ಜೊತೆಗೆ ಅದನ್ನು ಸಾಕಲು ನನಗೆ ಕಷ್ಟ ಆಯಿತು. ಈ ಹಿನ್ನೆಲೆ ಮಗುವನ್ನು ಕೆರೆಗೆ ಎಸೆದು ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮಗುವನ್ನು ಹತ್ಯೆ ಮಾಡಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿ, ಮಗುವಿನ ತಂದೆಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
Mysuru father kills one year old baby by throwing it into the lake as the baby was crying much and he couldn't take much care of it.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm