ಬ್ರೇಕಿಂಗ್ ನ್ಯೂಸ್
19-10-23 05:02 pm HK News Desk ಕ್ರೈಂ
ಮೈಸೂರು, ಅ.19: ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಮಾಕೋಡು ಗ್ರಾಮದ ಗಣೇಶ್ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್ನನ್ನು ಬಂಧಿಸಿದ್ದಾರೆ.
2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಪುತ್ರಿಯರು ಇದ್ದರು. ಬಳಿಕ ಲಕ್ಷ್ಮಿ ಮತ್ತೊಂದು ಗಂಡು ಮಗುವಿಗೆ ಜನ್ಮ ನೀಡಿ ಇಹಲೋಕ ತ್ಯಜಿಸಿದರು. ನಂತರ ಗಣೇಶ್ ದೇವನಹಳ್ಳಿಯಿಂದ ತಮ್ಮ ಸ್ವಗ್ರಾಮ ಪಿರಿಯಾಪಟ್ಟಣದ ಮಾಕೋಡಿಗೆ ಬಂದು ವಾಸಿಸಲು ಆರಂಭಿಸಿದ್ದರು. ಈ ವೇಳೆ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಅತ್ತೆಯ ಬಳಿಯೇ ಬಿಟ್ಟು ಬಂದಿದ್ದರು. ಆದರೆ ಒಂದೂವರೆ ವರ್ಷದ ಮಗನನ್ನು ತನ್ನ ಬಳಿ ಇಟ್ಟುಕೊಂಡಿದ್ದರು. ಈ ವೇಳೆ ಮಗ ತುಂಬಾ ಅಳುತ್ತಿದ್ದ. ಈ ಹಿನ್ನೆಲೆ ಮಗನನ್ನು ಸಾಕಲಾಗದೇ ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.
ಘಟನೆ ಸಂಬಂಧ ಗಣೇಶ್ ಅವರ ಅತ್ತೆ ಅಂಜನಮ್ಮ ಪಿರಿಯಾಪಟ್ಟಣ ಪೊಲೀಸರಿಗೆ ಗಣೇಶ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಗಣೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಣೇಶ್, ತನ್ನ ತಾಯಿ ಮತ್ತು ಅತ್ತೆ ಮಗುವನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಅದು ಸದಾ ಅಳುತ್ತಿತ್ತು. ಜೊತೆಗೆ ಅದನ್ನು ಸಾಕಲು ನನಗೆ ಕಷ್ಟ ಆಯಿತು. ಈ ಹಿನ್ನೆಲೆ ಮಗುವನ್ನು ಕೆರೆಗೆ ಎಸೆದು ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮಗುವನ್ನು ಹತ್ಯೆ ಮಾಡಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿ, ಮಗುವಿನ ತಂದೆಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
Mysuru father kills one year old baby by throwing it into the lake as the baby was crying much and he couldn't take much care of it.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm