ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm