ಬ್ರೇಕಿಂಗ್ ನ್ಯೂಸ್
23-10-23 05:47 pm Mangalore Correspondent ಕ್ರೈಂ
ಉಳ್ಳಾಲ, ಅ.23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.
ನಟೋರಿಯಸ್ ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿವೆ.
2010 ಮತ್ತು 2013ರಲ್ಲಿ ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ,
ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.
ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನಾ ಮತ್ತು ಮನೀಷ್ ಕಂಟ್ರೋಲ್ ಮಾಡುತ್ತಿದ್ದರು. ಕರಾವಳಿಯ ಭೂಗತ ವ್ಯವಹಾರವನ್ನು ಅಲಿ ಮುನ್ನಾನೇ ನಿರ್ವಹಿಸುತ್ತಿದ್ದ. ಕಾರ್ಕಳದ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್ ಕೊಲೆಯಾದ ನಂತರ ಅಲಿ ಮುನ್ನಾ ಕಂಗಾಲಾಗಿ ಮುಂಬೈ, ಬೆಂಗಳೂರಲ್ಲೇ ತಲೆಮರೆಸಿಕೊಂಡಿದ್ದ. ಆನಂತರವೂ ಹಫ್ತಾ ವಸೂಲಿಯಲ್ಲಿ ತೊಡಗಿಸಿದ್ದ ಅಲಿ ಮುನ್ನಾನನ್ನು ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.
Mangalore Underworld don Ravi Pujari Kali Yogesh close aide Mohammed Hannif arrested
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm