ಬ್ರೇಕಿಂಗ್ ನ್ಯೂಸ್
29-10-23 03:05 pm Mangalore Correspondent ಕ್ರೈಂ
ಮಂಗಳೂರು, ಅ.29: ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನಕಲಿ ಮಾಡಿಸಿ ವಂಚನೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮೂವರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ.
ದೀಪಕ್ ಕುಮಾರ್ ಹೆಂಬ್ರಮ್ (33), ವಿವೇಕ್ ಕುಮಾರ್ ಬಿಶ್ವಾಸ್ (24) ಮತ್ತು ಮದನ್ ಕುಮಾರ್ (24) ಬಂಧಿತರು. ಇವರನ್ನು ಬಿಹಾರ ರಾಜ್ಯದ ಪೂರ್ನಿಯಾ ಜಿಲ್ಲೆಯಿಂದ ವಶಕ್ಕೆ ಪಡೆಯಲಾಗಿದೆ. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಸೂಚನೆಯಂತೆ ಸೈಬರ್ ಅಪರಾಧ ಬಗ್ಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬಿಹಾರದಲ್ಲಿ ಅಡಗಿಕೊಂಡಿದ್ದ ಮೂವರನ್ನು ಬಂಧಿಸಿ ಕರೆತಂದಿದ್ದಾರೆ.
ಆರೋಪಿಗಳಿಗೆ ಸಂಬಂಧಪಟ್ಟ ಹತ್ತು ಬ್ಯಾಂಕ್ ಖಾತೆಗಳಿಂದ 3,60,242 ರುಪಾಯಿಗಳನ್ನು ಸೀಜ್ ಮಾಡಲಾಗಿದೆ. ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದು ತಾಂತ್ರಿಕ ಸಾಕ್ಷ್ಯಗಳ ತನಿಖೆ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿ ಒಂದು ಸಾವಿರಕ್ಕೂ ಹೆಚ್ಚು ಪಿಡಿಎಫ್ ದಾಖಲಾತಿ ಪ್ರತಿಗಳನ್ನು ಹಾಗೂ ಆಂಧ್ರಪ್ರದೇಶ ಸೇರಿ ಇತರ ರಾಜ್ಯಗಳಿಗೆ ಸಂಬಂಧಪಟ್ಟ 300 ಕ್ಕೂ ಹೆಚ್ಚು ಪಿಡಿಎಫ್ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಮಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2.0 ವೆಬ್ ಸೈಟ್ ನಿಂದ ಹ್ಯಾಕ್ ಮಾಡಿ, ಗ್ರಾಹಕರ ಆಧಾರ್ ಮಾಹಿತಿಗಳನ್ನು ಸಂಗ್ರಹಿಸಿ ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಂಡಿದ್ದರು.
ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದವು. ವಿಶೇಷ ತನಿಖೆಗಾಗಿ ಸಾರ್ವಜನಿಕರ ಒತ್ತಾಯ ಕೇಳಿಬರುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದರು. ಇತ್ತೀಚೆಗೆ ಎಎಸ್ಐ ಒಬ್ಬರ ಖಾತೆಯಿಂದಲೂ ಸಬ್ ರಿಜಿಸ್ಟ್ರಾರ್ ಕಚೇರಿಯಿಂದಲೇ ಆಧಾರ್ ಮಾಹಿತಿ ಸೋರಿಕೆಯಾಗಿ ಹಣ ಕಳೆದುಹೋಗಿತ್ತು. ಇದೇ ರೀತಿಯ ಅಕ್ರಮ ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವು ಕಡೆ ಆಗಿದ್ದು ಪ್ರಕರಣ ದಾಖಲಾಗಿತ್ತು.
Aadhar fraud at Sub register office in Mangalore, three from Bihar arrested by Mangalore cyber police. Recently more than 25 FIR had been registered at cyber police including Traffic ASI where people had lost laksh of rupees. Finally Mangaluru police have succeeded in Nabbing the accused from Bihar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm