ಬ್ರೇಕಿಂಗ್ ನ್ಯೂಸ್
29-10-23 10:38 pm Bangalore Correspondent ಕ್ರೈಂ
ಬೆಂಗಳೂರು, ಅ.29: ನೀವು ಕಳುಹಿಸಿರುವ ಪಾರ್ಸೆಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ವಂಚಕರು ಆಕೆಯಿಂದಲೇ 13 ಲಕ್ಷ ರೂ. ಪೀಕಿಸಿದ ಘಟನೆ ನಡೆದಿದೆ.
ಬೆಂಗಳೂರು ನಗರದ ವಿಕ್ಟೋರಿಯಾ ಲೇಔಟ್ ಪಾಮ್ಗ್ರೋವ್ ರಸ್ತೆಯ ನಿವಾಸಿ 62 ವರ್ಷದ ಪ್ರಿಯಾ (ಹೆಸರು ಬದಲಿಸಲಾಗಿದೆ) ವಂಚನೆಗೊಳಗಾದ ಮಹಿಳೆ. ಮಹಿಳೆ ಯಾವುದೇ ಪಾರ್ಸೆಲ್ ಕಳುಹಿಸದಿದ್ದರೂ, ನೀವು ಥಾಯ್ಲೆಂಡಿಗೆ ಪಾರ್ಸೆಲ್ ಮಾಡಿದ್ದೀರಿ ಎಂದು ಹೇಳಿ ಆಕೆಯ ಆಧಾರ್ ಕಾರ್ಡ್ ಸಂಖ್ಯೆ ತಿಳಿಸಿ ನಂಬಿಸಿ ಯಾಮಾರಿಸಿದ್ದಾರೆ.
ಮುಂಬೈನ ಕೊರಿಯರ್ ಕಂಪನಿಯ ಎಕ್ಸಿಕ್ಯೂಟಿವ್ ಎಂದು ಹೇಳಿ ಮಹಿಳೆಗೆ ದೂರವಾಣಿ ಕರೆ ಮಾಡಿದ್ದ ವಂಚಕರು, ಥಾಯ್ಲೆಂಡ್'ಗೆ ನೀವು ಕಳುಹಿಸಿರುವ ಪಾರ್ಸೆಲ್ ನಲ್ಲಿ 140 ಗ್ರಾಂ ಎಂಡಿಎಂ ಡ್ರಗ್ಸ್, ಎಂಟು ಪಾಸ್ಪೋರ್ಟ್ಗಳು ಮತ್ತು ಐದು ಕ್ರೆಡಿಟ್ ಕಾರ್ಡ್ಗಳು ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಈ ವೇಳೆ ಮಹಿಳೆ ನಾನು ಯಾವುದೇ ಪಾರ್ಸೆಲ್ ಕಳುಹಿಸಿಲ್ಲ ಎಂದಿದ್ದಾರೆ. ಆದರೆ, ವಂಚಕರು ಆಕೆಯನ್ನು ನಂಬಿಸಲು ಆಕೆಯ ಆಧಾರ್ ಕಾರ್ಡ್ ಸಂಖ್ಯೆಯನ್ನು ಹೇಳಿದ್ದು ನಂಬಿಕೆ ಬರುವಂತೆ ಮಾಡಿದ್ದಾರೆ.
ಮುಂಬೈ ಕಸ್ಟಮ್ಸ್ ಅಧಿಕಾರಿಗಳು ಪಾರ್ಸೆಲ್ ಅನ್ನು ವಶಪಡಿಸಿದ್ದಾರೆ. ನಾವು ಕೂಡ ಮುಂಬೈ ಸೈಬರ್ ಕ್ರೈಮ್ ಪೊಲೀಸರನ್ನು ಸಂಪರ್ಕಿಸಿದ್ದೇವೆ ಎಂದು ಹೇಳಿ, ಆಕೆಯಲ್ಲಿ ಆತಂಕ ಹೆಚ್ಚಿಸಿದ್ದಾರೆ. ಅಲ್ಲದೆ, ಮಹಿಳೆಗೆ ಸ್ಕೈಪ್ ಡೌನ್ ಲೋಡ್ ಮಾಡುವಂತೆ ತಿಳಿಸಿ, ಕಸ್ಟಮ್ಸ್ ಕೇಸಿನಿಂದ ಪಾರಾಗಲು ವ್ಯವಸ್ಥೆ ಮಾಡುತ್ತೇವೆಂದು ಹೇಳಿ ವೈಯಕ್ತಿಕ ಮಾಹಿತಿಗಳನ್ನು ತಿಳಿಸುವಂತೆ ಲಿಂಕ್ ಕಳುಹಿಸಿದ್ದಾರೆ. ಬಳಿಕ ಬ್ಯಾಂಕ್ ಖಾತೆಯ ಸಂಖ್ಯೆ ನೀಡಿ, ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದಾರೆ.
ಇದನ್ನು ನಂಬಿದ ಮಹಿಳೆ ಮರುದಿನ ಬ್ಯಾಂಕ್'ಗೆ ಹೋಗಿ ವಂಚಕರು ನೀಡಿದ್ದ ಬ್ಯಾಂಕ್ ಖಾತೆಯ ಸಂಖ್ಯೆಗೆ 13 ಲಕ್ಷ ರೂ. ಹಣ ವರ್ಗಾಯಿಸಿದ್ದಾರೆ. ಖಾತೆಗೆ ಹಣ ಬರುತ್ತಿದ್ದಂತೆಯೇ ವಂಚಕರು ತಮಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ನಾಶಪಡಿಸಿ ಸಂಪರ್ಕ ಕಡಿತಗೊಳಿಸಿದ್ದಾರೆ. ವಂಚನೆ ತಿಳಿದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
A woman was duped of Rs 13 lakh by fraudsters who threatened her that her parcel contained drugs. The incident took place. The victim has been identified as 62-year-old Priya (name changed), a resident of Palm Grove Road, Victoria Layout, Bengaluru city. Though the woman did not send any parcel, they told her that she had sent the parcel to Thailand and gave her Aadhaar card number.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm