ಬ್ರೇಕಿಂಗ್ ನ್ಯೂಸ್
30-10-23 01:54 pm Mangalore Correspondent ಕ್ರೈಂ
ಮಂಗಳೂರು, ಅ.30: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಟೀಲು ಗಿಡಿಗೆರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಕೊಲೆಯಾಗಿದ್ದು ಮೂರು ದಿನಗಳ ಬಳಿಕ ಭಾನುವಾರ ಬೆಳಕಿಗೆ ಬಂದಿದೆ. ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (55) ಕೊಲೆಯಾದವರು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಪಕ್ಕದ ಮನೆಯವರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ತಪಾಸಣೆ ನಡೆಸಿದಾಗ ಕೊಲೆ ನಡೆದಿರುವುದು ಪತ್ತೆಯಾಗಿದೆ.
ಕೈಕಾಲುಗಳನ್ನು ಕಟ್ಟಿದ ಸ್ಥಿತಿಯಲ್ಲಿದ್ದು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಮೈಯಲ್ಲಿ ರಕ್ತದ ಕಲೆಗಳು, ತರಚಿದ ಗಾಯಗಳಿವೆ. ಕೊಲೆಯಾಗಿ ಮೂರು ದಿನ ಆಗಿದ್ದರಿಂದ ಬಾತುಕೊಂಡು ವಾಸನೆ ಬರುತ್ತಿತ್ತು. ಕಟೀಲು ಚರ್ಚ್ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ರತ್ನಾ ಶೆಟ್ಟಿ ತನ್ನ ಮಗನೊಂದಿಗೆ ವಾಸವಿದ್ದರು. ಕೃತ್ಯ ಬೆಳಕಿಗೆ ಬಂದ ಕೂಡಲೇ ಮಗನಿಗೆ ಫೋನ್ ಮಾಡಿದ್ದರು. ಮೊದಲು ಕಿನ್ನಿಗೋಳಿಯಲ್ಲಿದ್ದೇನೆ ಎಂದಿದ್ದ ಮಗ ರವಿರಾಜ್, ಬಳಿಕ ಫೋನ್ ಸ್ವಿಚ್ ಆಫ್ ಮಾಡಿದ್ದ. ಪೊಲೀಸರು ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಗನಿಂದಲೇ ಕೊಲೆ ಶಂಕೆ
ಮಗ ರವಿರಾಜ್ ಗಾಂಜಾ ವ್ಯಸನಿಯಾಗಿದ್ದು ಕಿನ್ನಿಗೋಳಿಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಸ್ಥಳೀಯರು ಈತನಲ್ಲಿ ತಾಯಿ ಬಗ್ಗೆ ವಿಚಾರಿಸಿದಾಗ, ಅವರಿಗೆ ಹುಷಾರಿಲ್ಲ. ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದೇನೆ ಎಂದು ತಿಳಿಸಿದ್ದ. ಅ.29 ರಂದು ಬೆಳಗ್ಗೆ ವಾಸನೆ ಬರುತ್ತಿದ್ದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ರತ್ನಾ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಬಳಿಕ ಪೊಲೀಸರನ್ನು ಕರೆಸಿ, ಬಾಗಿಲು ಒಡೆದು ನೋಡಿದಾಗ ಕೈಕಾಲುಗಳನ್ನು ನೈಲಾನ್ ಹಗ್ಗದಿಂದ ಕಟ್ಟಿರುವುದು ಪತ್ತೆಯಾಗಿದೆ.
ಆರೇಳು ವರ್ಷಗಳ ಹಿಂದೆ ರತ್ನಾ ಶೆಟ್ಟಿ ಗಂಡ ತೀರಿಕೊಂಡಿದ್ದರು. ಆನಂತರ ಬಾಡಿಗೆ ಮನೆಯಲ್ಲಿದ್ದು ಹೊಟೇಲ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು. ಮಗ ಕೆಲವೊಮ್ಮೆ ಮನೆಗೆ ಬಂದು ಇರುತ್ತಿದ್ದ.
Mother killed at Kateel in Mangalore, Ganja Son suspected for killing.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm