ಬ್ರೇಕಿಂಗ್ ನ್ಯೂಸ್
31-10-23 01:37 pm Hk News Desk ಕ್ರೈಂ
ಕೊಚ್ಚಿ, ಅ.31: ಕ್ರಿಸ್ತಿಯನ್ನರ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಪೋಟಕ್ಕೆ ಕಾರಣಕರ್ತ ಎನ್ನಲಾದ ಆರೋಪಿ ಡೊಮಿನಿಕ್ ಮಾರ್ಟಿನ್, ತಾನು ಅಂತರ್ಜಾಲದಿಂದ ಬಾಂಬ್ ತಯಾರಿಕೆಯನ್ನು ಕಲಿತು ಕೇವಲ 3 ಸಾವಿರ ರೂ. ಖರ್ಚಿನಲ್ಲಿ ಬಾಂಬ್ ತಯಾರಿಸಿದ್ದಾಗಿ ಹೇಳಿಕೊಂಡಿದ್ದಾನೆ.
ಡೊಮಿನಿಕ್ ಮಾರ್ಟಿನ್ ಹಿಂದೆ ಗಲ್ಫ್ ದೇಶದಲ್ಲಿ ಉದ್ಯೋಗದಲ್ಲಿದ್ದು ಎರಡು ತಿಂಗಳ ಹಿಂದೆ ಊರಿಗೆ ಬಂದಿದ್ದ. ಈತನ ಕುಟುಂಬ ಕೊಚ್ಚಿ ಬಳಿ ಐದು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ. ಇಲೆಕ್ಟ್ರಿಕ್ ಸರ್ಕ್ಯುಟ್ನಲ್ಲಿ ಪರಿಣಿತ ಎಂದು ಹೇಳಲಾದ ಮಾರ್ಟಿನ್, ದುಬೈನಲ್ಲಿ ಫೋರ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಪ್ರಾಥಮಿಕ ತನಿಖೆಯಲ್ಲಿ ಐಇಡಿಗಳನ್ನು ಪಟಾಕಿಗಳಲ್ಲಿ ಬಳಸುವ ಕಡಿಮೆ ದರ್ಜೆಯ ಸ್ಪೋಟಕಗಳಿಂದ ಬಾಂಬ್ ತಯಾರಿಸಿದ್ದಾನೆ. ಮೂಲಗಳ ಪ್ರಕಾರ, ಮಾರ್ಟಿನ್ ತನ್ನ ಮನೆಯಲ್ಲೇ ಐಇಡಿಗಳನ್ನು ಜೋಡಿಸಿದ್ದು ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಭಾಗವಹಿಸಿದವರನ್ನು ಕೊಲ್ಲುವ ಉದ್ದೇಶದಿಂದ ಸ್ಪೋಟಕಗಳನ್ನು ಹಾಲ್ನೊಳಗೆ ಇರಿಸಿದ್ದ.
ಸ್ಫೋಟ ಘಟನೆ ನಡೆದ ಬೆನ್ನಲ್ಲೇ, ಮಾರ್ಟಿನ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವೀಡಿಯೊ ಸಂದೇಶವನ್ನು ಪೋಸ್ಟ್ ಮಾಡಿದ್ದ. ವೀಡಿಯೊದಲ್ಲಿ, ಸಂಘಟನೆಯ ಬೋಧನೆಗಳು ದೇಶದ್ರೋಹಿ ಆಗಿರುವುದರಿಂದ ತಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದ. ಜೆಹೋವಾ ಸಮುದಾಯವು ಜನರಿಗೆ, ಮಕ್ಕಳಿಗೆ ತಪ್ಪು ಮೌಲ್ಯಗಳನ್ನು ಕಲಿಸುತ್ತಿದೆ. ಇಂತಹ ಕೃತ್ಯವನ್ನು ನಿಲ್ಲಿಸಲು ಕೇಳಿಕೊಂಡರೂ ಯಾರೂ ಗಮನಿಸಲಿಲ್ಲ. ಇದು ರಾಷ್ಟ್ರಕ್ಕೆ ಕೆಟ್ಟದು ಎಂದು ಅರ್ಥ ಮಾಡಿಕೊಂಡು, ಅವರ ಸಭೆಯಲ್ಲೇ ಸ್ಪೋಟಗಳನ್ನು ನಡೆಸಲು ನಿರ್ಧರಿಸಿದ್ದಾಗಿ ವಿಡಿಯೋದಲ್ಲಿ ತಿಳಿಸಿದ್ದ.
ಭಾನುವಾರ ಕೊಚ್ಚಿ ಬಳಿಯ ಕಲಮಸ್ಸೇರಿಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸರಣಿ ಸ್ಪೋಟದಲ್ಲಿ ಇಬ್ಬರು ಮಹಿಳೆಯರು ಮತ್ತು 12 ವರ್ಷದ ಬಾಲಕಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ. ಯೆಹೋವನ ಸಾಕ್ಷಿಗಳ ಅಧಿವೇಶನದಲ್ಲಿ ಸುಮಾರು 2,000 ಜನರು ಹಾಜರಿದ್ದರು.
The main suspect in serial blasts at a Kerala's prayer meeting on Sunday has claimed to have learned bomb-making from the internet. 48-year-old Dominic Martin, who is said to be an expert in electric circuit, says he spent about Rs 3,000 to make bombs.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm