ಬ್ರೇಕಿಂಗ್ ನ್ಯೂಸ್
31-10-23 08:02 pm Mangaluru Correspondent ಕ್ರೈಂ
ಮಂಗಳೂರು, ಅ.31: ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಹೊರಗೆಡವಿದ್ದು ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ. ಕಟೀಲು ಬಳಿಯ ಗಿಡಿಗೆರೆ ಎಂಬಲ್ಲಿ ತಾಯಿಯನ್ನು ಕೊಲೆಗೈದ ಕೃತ್ಯದಲ್ಲಿ ಬಜ್ಪೆ ಪೊಲೀಸರು ಮಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.
ಕಟೀಲು ಸಮೀಪದ ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಅ.26ರ ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ. ಭಾನುವಾರ ಬೆಳಗ್ಗೆ ತಾಯಿ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ನೊಣಗಳು ಮುತ್ತಿಕೊಂಡಿದ್ದು ಸ್ಥಳೀಯರು ನೋಡಿದಾಗ ರತ್ನಾ ಶೆಟ್ಟಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಬಜ್ಪೆ ಪೊಲೀಸರು ಕೊಲೆ ಶಂಕೆಯಲ್ಲಿ ತನಿಖೆ ನಡೆಸಿದ್ದರು. ಮಗ ರವಿರಾಜ್ ಮೇಲೆ ಶಂಕೆ ಉಂಟಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತಾನೇ ಕೊಂದಿರುವುದು ಎಂದು ಒಪ್ಪಿಕೊಂಡಿದ್ದಾನೆ. ರತ್ನಾ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ತಾಯಿ, ಮಗ ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅರೋಪಿ ರವಿ ಗಾಂಜಾ ವ್ಯಸನಿಯಾಗಿದ್ದು ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದೆ. ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Ganja Addict son kills mother at Kateel in Mangalore after trying to rape her. A 60-year-old woman died under mysterious circumstances at Durga Nagar of Kondela Village under the Kinnigoli Town Panchayat on Sunday,
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm