ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am