ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm