ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm