ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm