ಬ್ರೇಕಿಂಗ್ ನ್ಯೂಸ್
01-11-23 07:48 pm Udupi Correspondent ಕ್ರೈಂ
ಉಡುಪಿ, ನ.1: ಮನೆ ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ಬೆಂಗಳೂರು ಮೂಲದ ಕುಖ್ಯಾತ ಕಳ್ಳನನ್ನು ಉಡುಪಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಯಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ.
ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ ಆರೋಪಿ. 60ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿರುವ ಕಲ್ಕೆರೆ ಮಂಜನ ಬಂಧನದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತನಾಗಿದ್ದು ಈತನಿಂದ 31,55,930 ರೂ. ಮೌಲ್ಯದ 530 ಗ್ರಾಂ ಚಿನ್ನಾಭರಣ ಹಾಗೂ 15,12,000 ರೂ. ಮೌಲ್ಯದ 16.800 ಗ್ರಾಂ ಬೆಳ್ಳಿಯ ಆಭರಣಗಳನ್ನು ಮತ್ತು ಕಳವು ಮಾಡಲು ಬಳಸಿದ 2.50 ಲಕ್ಷ ರೂ. ಮೌಲ್ಯದ ಕಾರು, ನಕಲಿ ನಂಬರ್ ಪ್ಲೇಟ್ಗಳು ಮತ್ತು ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲದಾಸ್ ನಾಯಕ್ ಎಂಬವರ ಮನೆಗೆ ನುಗ್ಗಿದ್ದ ಕಳ್ಳರು, ಒಟ್ಟು 73,06,800 ರೂ. ಮೌಲ್ಯದ 1,882 ಗ್ರಾಂ ತೂಕದ ಚಿನ್ನಾಭರಣ ಹಾಗೂ 7450 ಗ್ರಾಂ ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಳ್ಳತನ ತನಿಖೆಗಾಗಿ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜಪ್ಪ, ಉಡುಪಿ ನಗರ ಠಾಣೆ ಎಸ್ಸೈ ಪುನೀತ್ ಕುಮಾರ್ ಬಿ.ಇ. ಹಾಗೂ ಈರಣ್ಣ ಶಿರಗುಂಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಪೊಲೀಸರು ಅ.31ರಂದು ಕಾರ್ಯಾಚರಣೆ ನಡೆಸುತ್ತಿದ್ದಾಗ ಆರೋಪಿಯನ್ನು ಕಾರು ಸಹಿತ ಉಡುಪಿ ಉದ್ಯಾವರ ಸಮೀಪದ ಬಲಾಯಿ ಪಾದೆ ಬಳಿ ವಶಕ್ಕೆ ಪಡೆದಿದ್ದರು.
ಆರೋಪಿ ವಿರುದ್ಧ ಉಡುಪಿ, ಬ್ರಹ್ಮಾವರ, ಹಾಸನ ಜಿಲ್ಲೆಯ ತರೀಕೆರೆ, ಅರಸಿಕೇರೆ ಮತ್ತು ಬೆಂಗಳೂರಿನ ಬಾಣಾವರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 60ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ತಿಳಿಸಿದ್ದಾರೆ.
Notorious thief arrested by Udupi Police who has 60 robbery cases.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm