ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm