ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm