ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm