ಬ್ರೇಕಿಂಗ್ ನ್ಯೂಸ್
04-11-23 09:19 pm Mangalore Correspondent ಕ್ರೈಂ
ಮಂಗಳೂರು, ನ.4: ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಪ್ರಕರಣದ ಬೆನ್ನತ್ತಿದ ಪೊಲೀಸರು ಕುಖ್ಯಾತ ಸರ ಕಳ್ಳನನ್ನು ಬಂಧಿಸಿದ್ದಾರೆ.
ಅ.21ರಂದು ಘಟನೆ ನಡೆದಿದ್ದು ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಯ ಬಗ್ಗೆ ಮಂಗಳೂರು ಸಿಸಿಬಿ ಘಟಕದಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿ ಚಂದ್ರಶೇಖರ ಅಲಿಯಾಸ್ ಡಾರ್ಲಿಂಗ್ ಚಂದ್ರ ಎಂಬಾತನನ್ನು ಪೊಲೀಸರು ಬಂಗ್ರಕೂಳೂರು ಬಳಿಯಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿ ಸುಲಿಗೆ ಮಾಡಿದ್ದ 21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ KA-41-EW-8959 ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ 21.3 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರ-1, VIVO ಕಂಪನಿಯ ಮೊಬೈಲ್ ಫೋನ್-1, HERO ಕಂಪನಿಯ ಕೀಪ್ಯಾಡ್ ಮೊಬೈಲ್ ಫೋನ್ – 1, KA-41-EW-8959 ಬಿಳಿ ಬಣ್ಣದ ಬಜಾಜ್ ಕಂಪನಿಯ ಪಲ್ಸರ್ NS 200 ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದು ಇದರ ಒಟ್ಟು ಮೌಲ್ಯ 2,41,000 ರೂ. ಆಗಬಹುದು.
ಆರೋಪಿತ ಡಾರ್ಲಿಂಗ್ ಚಂದ್ರ(29) ರಾಮನಗರ ಜಿಲ್ಲೆಯ ಬಿಡದಿ ನಿವಾಸಿಯಾಗಿದ್ದು ಈ ಹಿಂದೆ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police arrest Darling Chandra in chain snatching case in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm