ಬ್ರೇಕಿಂಗ್ ನ್ಯೂಸ್
04-11-23 09:19 pm Mangalore Correspondent ಕ್ರೈಂ
ಮಂಗಳೂರು, ನ.4: ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಪ್ರಕರಣದ ಬೆನ್ನತ್ತಿದ ಪೊಲೀಸರು ಕುಖ್ಯಾತ ಸರ ಕಳ್ಳನನ್ನು ಬಂಧಿಸಿದ್ದಾರೆ.
ಅ.21ರಂದು ಘಟನೆ ನಡೆದಿದ್ದು ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಯ ಬಗ್ಗೆ ಮಂಗಳೂರು ಸಿಸಿಬಿ ಘಟಕದಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿ ಚಂದ್ರಶೇಖರ ಅಲಿಯಾಸ್ ಡಾರ್ಲಿಂಗ್ ಚಂದ್ರ ಎಂಬಾತನನ್ನು ಪೊಲೀಸರು ಬಂಗ್ರಕೂಳೂರು ಬಳಿಯಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿ ಸುಲಿಗೆ ಮಾಡಿದ್ದ 21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ KA-41-EW-8959 ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ 21.3 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರ-1, VIVO ಕಂಪನಿಯ ಮೊಬೈಲ್ ಫೋನ್-1, HERO ಕಂಪನಿಯ ಕೀಪ್ಯಾಡ್ ಮೊಬೈಲ್ ಫೋನ್ – 1, KA-41-EW-8959 ಬಿಳಿ ಬಣ್ಣದ ಬಜಾಜ್ ಕಂಪನಿಯ ಪಲ್ಸರ್ NS 200 ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದು ಇದರ ಒಟ್ಟು ಮೌಲ್ಯ 2,41,000 ರೂ. ಆಗಬಹುದು.
ಆರೋಪಿತ ಡಾರ್ಲಿಂಗ್ ಚಂದ್ರ(29) ರಾಮನಗರ ಜಿಲ್ಲೆಯ ಬಿಡದಿ ನಿವಾಸಿಯಾಗಿದ್ದು ಈ ಹಿಂದೆ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police arrest Darling Chandra in chain snatching case in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm