ಬ್ರೇಕಿಂಗ್ ನ್ಯೂಸ್
13-11-20 12:45 pm Mangalore Correspondent ಕ್ರೈಂ
ಉಳ್ಳಾಲ, ನವೆಂಬರ್ 13: ನಾಲ್ಕು ದಿವಸಗಳ ಹಿಂದೆ ಪಜೀರು ಗೋವನಿತಾಶ್ರಮದಿಂದ ನಾಪತ್ತೆಯಾಗಿದ್ದ ಎರಡು ಮಕ್ಕಳ ತಾಯಿ, ವಿಧವೆ ಮಹಿಳೆಯೊಬ್ಬಳು ಉಳ್ಳಾಲದಲ್ಲಿ ಮಧ್ಯವಯಸ್ಕ ಮುಸ್ಲಿಂ ಪುರುಷನೊಂದಿಗೆ ಪತ್ತೆಯಾಗಿದ್ದು, ಕೊಣಾಜೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರಿನ ಅಡ್ಯಾರ್ ಪದವು ಮೂಲದ ಮಹಿಳೆ ವಿಧವೆಯಾಗಿದ್ದು ಅದೇ ಪರಿಸರದ ನಿವಾಸಿ ಆಗಿರುವ ಶೌಕತ್ ಎಂಬಾತನ ಜೊತೆ ಈ ಹಿಂದೆ ಸಂಪರ್ಕದಲ್ಲಿದ್ದಳು. ಈ ವಿಚಾರ ಅಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ತಿಳಿದು ಇತ್ತೀಚೆಗೆ, ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ವಿಶ್ವ ಹಿಂದು ಪರಿಷತ್ತಿಗೆ ಸೇರಿದ ಕೊಣಾಜೆ ಬಳಿಯ ಪಜೀರು ಗೋವನಿತಾಶ್ರಮಕ್ಕೆ ಸೇರಿಸಿದ್ದರೆನ್ನಲಾಗಿದೆ. ನಾಲ್ಕು ದಿವಸಗಳ ಹಿಂದೆ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಗುರುವಾರ ಮಹಿಳೆ, ಉಳ್ಳಾಲದಲ್ಲಿ ಶೌಕತ್ ಜೊತೆ ಬುರ್ಖಾಧಾರಿಯಾಗಿ ಪತ್ತೆಯಾಗಿದ್ದರು ಎನ್ನಲಾಗಿದ್ದು, ತನಿಖೆ ಹೆಸರನ್ನು ಆಯಿಷಾ ಎಂದು ಬದಲಿಸಿಕೊಂಡಿದ್ದಳು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ. ಅಡ್ಯಾರ್ ಮೂಲದವನೇ ಆಗಿರುವ ಶೌಕತ್ ಕೂಡ ವಿವಾಹಿತನಾಗಿದ್ದು ಆತನ ಹಿರಿ ಮಗಳಿಗೆ ಮುಂದಿನ ವಾರ ಮದುವೆ ಫಿಕ್ಸ್ ಆಗಿದ್ಯಂತೆ. ಈ ನಡುವೆಯೇ ಶೌಕತ್, ತನ್ನ ಕುಟುಂಬವನ್ನು ತೊರೆದಿದ್ದಾನೆ ಎನ್ನಲಾಗುತ್ತಿದೆ. ಬೇರೆ ಯುವತಿಯರ ಜೊತೆಗೂ ಆತ ಅಕ್ರಮ ಸಂಬಂಧಗಳನ್ನು ಇರಿಸಿದ್ದಾನೆಂದು ತಿಳಿದು ಬಂದಿದೆ.
ಆದರೆ, ಹಿಂದು ಮಹಿಳೆ ಪೊಲೀಸರಲ್ಲಿ ಶೌಕತ್ ಜೊತೆಯೇ ತೆರಳುವುದಾಗಿ ಪಟ್ಟು ಹಿಡಿದಿದ್ದಾಳೆ. ಬಜರಂಗದಳದ ಕಾರ್ಯಕರ್ತರು ಠಾಣೆಯಲ್ಲಿದ್ದು ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ್ದಾರೆ. ಮಧ್ಯ ವಯಸ್ಕ ವ್ಯಕ್ತಿಯೇ ಮಹಿಳೆಯನ್ನು ಪುಸಲಾಯಿಸಿ ಮತಾಂತರಿಸಲು ಯತ್ನಿಸಿದ್ದಾನೆಂದು ದೂರಿದ್ದಾರೆ.
A Widow Woman who was found missing from Adyarpaduv, Mangalore was found by Konaje Police with a Muslim Man. Bajrang Dal Members alleges it as Love Jihad. Konaje police are investigating the case.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm