ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm