ಬ್ರೇಕಿಂಗ್ ನ್ಯೂಸ್
12-11-23 12:42 pm Udupi Correspondent ಕ್ರೈಂ
ಉಡುಪಿ, ನ 13: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್ನಲ್ಲಿ ಭಾನುವಾರ ನಡೆದಿದೆ.
ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಎಂದು ಗುರುತಿಸಲಾಗಿದೆ. ಚೂರಿಯಿಂದ ಚುಚ್ಚಿ ಕೊಲೆಗೈಯಲಾಗಿದೆ. ಮೃತ ಹಸೀನಾ ಅವರ ಅತ್ತೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಉದ್ದೇಶಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

ಮನೆಯಲ್ಲಿ ಯಾವ ವಸ್ತುಗಳು ಕಳವು ನಡೆದಿಲ್ಲ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಮಾತಿನ ಚಕಮಕಿ ನಡೆಸಿದ್ದಾನೆ. ಮೊದಲು ಹಸೀನಾ, ಅಫ್ನಾನ್ ಹಾಗೂ ಅಯ್ನಾಝ್ಗೆ ಇರಿದಿದ್ದಾನೆ. ಈ ವೇಳೆ ಹೊರಗಡೆ ಆಟವಾಡುತ್ತಿದ್ದ ಆಸಿಂ ಸದ್ದು ಕೇಳಿ ಮನೆ ಒಳಗಡೆ ಬಂದಿದ್ದಾನೆ. ನಂತರ ಕಿರಿಯ ಮಗನನ್ನೂ ಕೊಂದಿದ್ದಾನೆ.
ಇದಾದ ಬಳಿಕ ಗಲಾಟೆ ಕೇಳಿ ಪಕ್ಕದ ಮನೆಯ ಯುವತಿ ತನ್ನ ಮನೆಯಿಂದ ಹೊರ ಬಂದಿದ್ದಾಳೆ. ದುಷ್ಕರ್ಮಿ ಆಕೆಯನ್ನೂ ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಹಸೀನಾ ಅತ್ತೆಗೂ ತೀವ್ರವಾದ ಗಾಯಗಳಾಗಿವೆ. ಹಸೀನಾ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ.
ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
Udupi Murder, Four including Two children brutally murdered in Hampankatte. four individuals, including a mother and her three children , were found brutally murdered in Hampankatte of Kemmannu, falling under the jurisdiction of the Malpe police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm