ಬ್ರೇಕಿಂಗ್ ನ್ಯೂಸ್
12-11-23 12:42 pm Udupi Correspondent ಕ್ರೈಂ
ಉಡುಪಿ, ನ 13: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್ನಲ್ಲಿ ಭಾನುವಾರ ನಡೆದಿದೆ.
ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಎಂದು ಗುರುತಿಸಲಾಗಿದೆ. ಚೂರಿಯಿಂದ ಚುಚ್ಚಿ ಕೊಲೆಗೈಯಲಾಗಿದೆ. ಮೃತ ಹಸೀನಾ ಅವರ ಅತ್ತೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಉದ್ದೇಶಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

ಮನೆಯಲ್ಲಿ ಯಾವ ವಸ್ತುಗಳು ಕಳವು ನಡೆದಿಲ್ಲ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಮಾತಿನ ಚಕಮಕಿ ನಡೆಸಿದ್ದಾನೆ. ಮೊದಲು ಹಸೀನಾ, ಅಫ್ನಾನ್ ಹಾಗೂ ಅಯ್ನಾಝ್ಗೆ ಇರಿದಿದ್ದಾನೆ. ಈ ವೇಳೆ ಹೊರಗಡೆ ಆಟವಾಡುತ್ತಿದ್ದ ಆಸಿಂ ಸದ್ದು ಕೇಳಿ ಮನೆ ಒಳಗಡೆ ಬಂದಿದ್ದಾನೆ. ನಂತರ ಕಿರಿಯ ಮಗನನ್ನೂ ಕೊಂದಿದ್ದಾನೆ.
ಇದಾದ ಬಳಿಕ ಗಲಾಟೆ ಕೇಳಿ ಪಕ್ಕದ ಮನೆಯ ಯುವತಿ ತನ್ನ ಮನೆಯಿಂದ ಹೊರ ಬಂದಿದ್ದಾಳೆ. ದುಷ್ಕರ್ಮಿ ಆಕೆಯನ್ನೂ ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಹಸೀನಾ ಅತ್ತೆಗೂ ತೀವ್ರವಾದ ಗಾಯಗಳಾಗಿವೆ. ಹಸೀನಾ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ.
ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
Udupi Murder, Four including Two children brutally murdered in Hampankatte. four individuals, including a mother and her three children , were found brutally murdered in Hampankatte of Kemmannu, falling under the jurisdiction of the Malpe police station.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm