ಬ್ರೇಕಿಂಗ್ ನ್ಯೂಸ್
14-11-23 08:34 pm Udupi Correspondent ಕ್ರೈಂ
ಉಡುಪಿ, ನ.14: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್ ಅರುಣ್ ಚೌಗಲೆ(35) ವಶಕ್ಕೆ ಪಡೆದ ಆರೋಪಿ. ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿದ ಬಗ್ಗೆ ಉಡುಪಿ ಪೊಲೀಸರು ದೃಢಪಡಿಸಿಲ್ಲ.







ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಯಿದೆ. ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆ ತರುತ್ತಿದ್ದಾರೆ. ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
Udupi Murder of four, accused arreated of Sangli arrested from Belagavi by Udupi Police. In a significant breakthrough, Udupi police have successfully apprehended the murderer responsible for the brutal murder of four individuals.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm