ಬ್ರೇಕಿಂಗ್ ನ್ಯೂಸ್
23-11-23 05:48 pm Udupi Correspondent ಕ್ರೈಂ
ಉಡುಪಿ, ನ.23: ಉಡುಪಿ ಜಿಲ್ಲೆಯನ್ನೇ ಬೆಚ್ಚಿಬಿಳಿಸಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ಪಿ ಅರುಣ್ ಕುಮಾರ್ ಮತ್ತಷ್ಟು ಸ್ಪಷ್ಟನೆ ನೀಡಿದ್ದಾರೆ. ಕೊಲೆಯಾದ ಗಗನಸಖಿ ಐನಾಝ್ ಮತ್ತು ಹಂತಕ ಪ್ರವೀಣ್ ಮಧ್ಯೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಒಂದು ತಿಂಗಳಿಂದ ಐನಾಝ್ ಸರಿಯಾಗಿ ಮಾತನಾಡದೆ ದೂರ ಮಾಡಿದ್ದ ಕಾರಣ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಎಸ್ಪಿ ಡಾ.ಅರುಣ್ ಅವರು, ತೃಪ್ತಿ ನಗರದಲ್ಲಿ ನಡೆದ ಕೊಲೆ ಪ್ರಕರಣ ಭೇದಿಸಲು ಒಟ್ಟು 11 ತಂಡಗಳನ್ನು ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಇದಕ್ಕಾಗಿ ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನಾಲ್ವರ ಕೊಲೆ ಪ್ರಕರಣ ನಮಗೆ ದೊಡ್ಡ ಸವಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾದ ಪ್ರಕರಣವೂ ಇದಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ ಎಂದರು.


ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡುತ್ತಿದ್ದಾರೆ. ಯಾಕಾಗಿ ಕೊಲೆ ಮಾಡಿದ್ದಾನೆ ಎಂಬುದರಿಂದ ಹಿಡಿದು ಆತನ ಸಹವರ್ತಿಗಳು ಎಲ್ಲರನ್ನೂ ವಿಚಾರಣೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಐನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರ ಮಧ್ಯೆ ಉತ್ತಮ ಗೆಳೆತನವಿತ್ತು. ಈ ನಡುವೆ, ಪ್ರವೀಣ್, ಐನಾಝ್ ಗೆ ಹಲವಾರು ರೀತಿಯ ಸಹಾಯ ಮಾಡಿದ್ದಾರೆ. ಆದರೆ ಒಂದು ತಿಂಗಳಿನಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಮೊಬೈಲ್ ಬ್ಲಾಕ್ ಮಾಡಿದ್ದಳು.

ಹೀಗಾಗಿ ಪ್ರವೀಣ್ ಅತಿಯಾದ ಪೊಸೆಸಿವ್ ನೆಸ್ ನಿಂದ ಆಕೆಯನ್ನು ಕೊಲೆ ಮಾಡಬೇಕೆಂದು ಮನೆಗೆ ಬಂದಿದ್ದಾನೆ. ಮೊದಲು ಪ್ರವೀಣ್, ಐನಾಝ್ ಗೆ ದಾಳಿ ಮಾಡಿದ್ದ. ಈ ವೇಳೆ ಅಡ್ಡ ಬಂದ ತಾಯಿ ಹಸೀನಾ, ಅಫ್ನಾನ್, ಆಸಿಂ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬಳಿಕ ಬೇರೆ ಬೇರೆ ವಾಹನ ಹತ್ತಿಕೊಂಡು ಮಂಗಳೂರಿಗೆ ಪರಾರಿಯಾಗಿದ್ದಾನೆ. ಗಂಭೀರ ಪ್ರಕರಣ ಆಗಿರುವುದರಿಂದ ಎಲ್ಲಾ ಮಾಹಿತಿಗಳನ್ನು ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಎಸ್.ಪಿ ಹೇಳಿದರು. ಹಸೀನಾ ಅವರಿಗೆ ಹಣಕಾಸು ವಿಚಾರದಲ್ಲಿ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇವೆ ಎಂದರು.
Udupi Murder case, Accused praveen killed Ainaz for avoiding him for a month. It is gathered that the police subjected the accused to the inquest process without interruptions. The knife, mask, bag and other items used by him for the murder were found in his flat in Bejai. Police have confiscated a scooter registered on Chowgule’s name parked near a rented room at Bejai of the deceased woman Ainaz.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm