ಬ್ರೇಕಿಂಗ್ ನ್ಯೂಸ್
24-11-23 07:06 pm Mangalore Correspondent ಕ್ರೈಂ
ಉಳ್ಳಾಲ, ನ.24: ಮೈಯಿಡೀ ಚಿನ್ನವನ್ನ ಹೋಲುವ ಒನ್ ಗ್ರಾಮ್ ಒಡವೆಗಳನ್ನ ಹಾಕಿದ್ದ ವ್ಯಕ್ತಿಯೋರ್ವ ಕಳೆದ ತಿಂಗಳು ತೊಕ್ಕೊಟ್ಟಿನ ಎರಡು ಅಂಗಡಿಗಳಿಗೆ ವಂಚಿಸಿದ ಪ್ರಕರಣ ನಡೆದ ಬೆನ್ನಲ್ಲೇ ಅದೇ ಶೋಕಿಲಾಲ ಕುತ್ತಾರು ಪಂಡಿತ್ ಹೌಸ್ನ ಮೊಬೈಲ್ ಮಳಿಗೆಯಲ್ಲಿ ಮೊಬೈಲ್ ಖರೀದಿಸಿ ಫೋನ್ ಸ್ವಿಚ್ ಆಫ್ ಆಗಿದೆ, ಗೂಗಲ್ ಪೇ ಮಾಡಲು ಆಗುವುದಿಲ್ಲ, ನಾಳೆ ಹಣ ಕೊಡುವುದಾಗಿ ಹೇಳಿ ವಂಚಿಸಿದ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಖತರ್ನಾಕ್ ವಂಚಕ ಗೂಡ್ಸ್ ಮುನೀರನ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ಅಯ್ಯಂಗಾರ್ ಬೇಕರಿ ಮತ್ತು ಸಮೀಪದ ಪೂರ್ಣಿಮಾ ಎಂಬವರ ದಿನಸಿ ಅಂಗಡಿಗೆ ಮೈಯಿಡೀ ಚಿನ್ನದ ಒಡವೆ ಧರಿಸಿದ್ದ ವ್ಯಕ್ತಿಯೋರ್ವ ಹೆಲ್ಮೆಟ್ ತೆಗೆಯದೆ ತಾನು ನಿತಿನ್ ಶೆಟ್ಟಿ ಎಂದು ಪರಿಚಯಿಸಿ ಸಾವಿರಾರು ರೂಪಾಯಿ ಮೌಲ್ಯದ ಸಿಹಿ ತಿಂಡಿ, ದಿನಸಿ ಖರೀದಿಸಿ ಗೂಗಲ್ ಪೇ ಮಾಡಲು ಫೋನ್ ಸ್ವಿಚ್ ಆಫ್ ಆಗಿದೆ, ಈಗಲೇ ಹಣ ತಂದು ಕೊಡುವೆ ಎಂದು ಹೇಳಿ ವ್ಯಾಪಾರಿಗಳನ್ನ ಯಾಮಾರಿಸಿದ್ದ. ಅದೇ ಶೋಕಿಲಾಲ ಕಳೆದ ನವೆಂಬರ್ 13 ರಂದು ಮತ್ತೆ ಕುತ್ತಾರು ಪಂಡಿತ್ ಹೌಸ್ ನಲ್ಲಿರುವ "ಸುಧಿ ಕಲೆಕ್ಷನ್" ಎಂಬ ಮೊಬೈಲ್ ಅಂಗಡಿಗೆ ತೆರಳಿ ಮಾಲಕ ದೀಪಕ್ ಅವರಲ್ಲಿ ಸೆಕೆಂಡ್ ಹ್ಯಾಂಡ್ ಮೊಬೈಲನ್ನ ಖರೀದಿಸಿ ಗೂಗಲ್ ಪೇ ಮಾಡಲು ತನ್ನ ಮೊಬೈಲ್ ಸ್ವಿಚ್ ಆಫ್ ಎಂದು ಸಬೂಬು ನೀಡಿದ್ದು ನನ್ನ ಮನೆ ಸಮೀಪದಲ್ಲೇ ಇದೆ, ನಾಳೆ ಹಣ ನೀಡೋದಾಗಿ ತನ್ನ ಸಂಪರ್ಕದ ಮೊಬೈಲ್ ನಂಬರ್ ನೀಡಿ ತೆರಳಿದ್ದ.


ದೀಪಕ್ ಅವರು ವಂಚಕ ನೀಡಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ತಾನು ಮೋಸ ಹೋಗಿರುವುದು ತಿಳಿದ ಮೇಲೆ ಮೊಬೈಲ್ ನಂಬರಿನ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಅದು ಖತರ್ನಾಕ್ ವಂಚಕ ಗೂಡ್ಸ್ ಮುನೀರನದೆಂದು ತಿಳಿದುಬಂದಿದೆ. ಗೂಡ್ಸ್ ಮುನೀರನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ವಂಚನೆ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈತ ಈಗ ಡಮ್ಮಿ ಒಡವೆಗಳನ್ನ ಧರಿಸಿ ಅಮಾಯಕರನ್ನ ಯಾಮಾರಿಸಿ ವಂಚಿಸುವ ಖಯಾಲಿ ಬೆಳೆಸಿದ್ದಾನೆ. ಮೂಲತಃ ಕಸಬಾ ಬೆಂಗ್ರೆ ನಿವಾಸಿಯಾಗಿರೋ ಈತ ತೊಕ್ಕೊಟ್ಟು ಆಸುಪಾಸಿನಲ್ಲೇ ಬಿಡಾರ ಹೂಡಿರುವ ಶಂಕೆ ಇದೆ. ಉಳ್ಳಾಲ ಪೊಲೀಸರು ಆದಷ್ಟು ಬೇಗನೆ ಈತನ ಹೆಡೆಮುರಿ ಕಟ್ಟ ಬೇಕೆಂದು ವಂಚನೆಗೊಳಗಾದ ದೀಪಕ್ ಒತ್ತಾಯಿಸಿದ್ದಾರೆ.
Mangalore Ullal police arrest one for Cheating bakery and shops of money.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm