ಬ್ರೇಕಿಂಗ್ ನ್ಯೂಸ್
25-11-23 06:18 pm Mangalore Correspondent ಕ್ರೈಂ
ಮಂಗಳೂರು, ನ.25: ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಬೆಲೆಯ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದು 1.62 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿತರನ್ನು ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲನಿ ನಿವಾಸಿ, ಹಾಲಿ ವಾಸ ವಿಟ್ಲ ಮಂಗಿಲಪದವು ನಿವಾಸಿ ಪ್ಯಾರೇಜಾನ್ @ ಸೇಟು(37), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು (28), ನಾಗಪಟ್ಟಿನಂ ಜಿಲ್ಲೆ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್ (22) ಎಂದು ಗುರುತಿಸಲಾಗಿದೆ.
ನ.25 ರಂದು ಮಂಗಳೂರು ನಗರದ ಪಂಪ್ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಫ್ಟ್ ಕಾರಿನಲ್ಲಿ ಅಂಬರ್ ಗ್ರೀಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000/- ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್, 1,57,50,000/-) REDMI ಕಂಪನಿಯ ಮೊಬೈಲ್ ಫೋನ್ -1 (10,000/-) ಕೆಎ-25-MG-0625 ನೇ ಸಿಲ್ವರ್ ಬಣ್ಣದ ಸ್ವಿಫ್ಟ್ (5,00,000/-) MOTOROLA ಕಂಪನಿಯ ಮೊಬೈಲ್ ಫೋನ್ -1 (10,000/-), REDMI ಕಂಪನಿಯ ಮೊಬೈಲ್ ಫೋನ್ -1 (10,000/-) ವಶಪಡಿಸಿಕೊಂಡಿದ್ದಾರೆ.
ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಸಿಸಿಬಿ ಘಟಕದ ಸಿಬ್ಬಂದಿ ಮಾಡಿದ್ದರು. ನ.19ರಂದು 7.73 ಕೋಟಿ ಮೌಲ್ಯದ ಅಂಬರ್ ಗ್ರೀಸನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.
Also Read: ಮಂಗಳೂರು ಸಿಸಿಬಿ ಮೇಜರ್ ಕಾರ್ಯಾಚರಣೆ ; ಎಂಟು ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ, ಇಬ್ಬರ ಬಂಧನ
After 7 crore worh Ambergris seized by Mangalore CCB Police, another 1.5 crore Ambergris seized at Pumpwell in which three have been arretsed. 7 crore worh Ambergris seized by Mangalore CCB Police, two arrested while trying to sell at Kuntikan junction. Upon valid information received by CCB police, the raid was conducted under the orders of Mangalore Police Commissioner Anupam Agarwal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm