ಬ್ರೇಕಿಂಗ್ ನ್ಯೂಸ್
26-11-23 09:25 pm Mangaluru Correspondent ಕ್ರೈಂ
ಪುತ್ತೂರು, ನ.26: ಸವಣೂರು ಗ್ರಾಮದ ಎಡಪತ್ಯ ಫಾರ್ಮ್ ನಲ್ಲಿ 25 ಗೋಣಿಯಷ್ಟು ಒಣ ಅಡಿಕೆ ಕಳ್ಳತನ ಆಗಿರುವ ಶಂಕೆ ವ್ಯಕ್ತವಾಗಿದೆ. ನ.25ರಂದು ಶನಿವಾರ ನಸುಕಿನಲ್ಲಿ ತಲವಾರು ತೋರಿಸಿ ಪರಾರಿಯಾಗಿದ್ದ ಅಡಿಕೆ ಕಳ್ಳರ ಕೃತ್ಯದ ಹಿನ್ನೆಲೆಯಲ್ಲಿ ಸೋಲಾರ್ ಅಂಗಳದಲ್ಲಿ ಇರಿಸಲಾಗಿದ್ದ ಅಡಿಕೆಯನ್ನು ಪರಿಶೀಲಿಸಿದಾಗ 5 ಲಕ್ಷದಷ್ಟು ಮೊತ್ತದ ಅಡಿಕೆ ಕಳವಾಗಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಅಡಿಕೆ ಫಾರ್ಮ್ಸ್ ಮಾಲೀಕ, ಸವಣೂರು ಗ್ರಾಮದ ನಿವಾಸಿ ಚಂದ್ರ ಎಡಪತ್ಯ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ. ನ.25ರಂದು ನಸುಕಿನ ವೇಳೆಗೆ 3.30ರ ಸುಮಾರಿಗೆ ಚಂದ್ರ ಅವರ ಪುತ್ರ ನಿಷ್ಕಲ್ ರಾಮ, ಮೈಸೂರಿನಿಂದ ಬೈಕಿನಲ್ಲಿ ಮನೆಗೆ ಆಗಮಿಸಿದ್ದರು. ಈ ವೇಳೆ, ಮನೆಯ ಅಂಗಳಕ್ಕೆ ಸ್ಕೂಟರ್ ಮತ್ತು ಇನ್ನೊಂದು ಕಾರಿನಲ್ಲಿ ಬಂದಿದ್ದ ಅಡಿಕೆ ಕಳ್ಳರು ಸುಲಿದಿಟ್ಟ ಅಡಿಕೆ ಮತ್ತು ಒಣಗಲು ಹಾಕಿದ್ದ ಅಡಿಕೆಯನ್ನು ಕಳವು ಮಾಡುತ್ತಿದ್ದರು.
ಅಡಿಕೆಯನ್ನು ತಮ್ಮ ವಾಹನಕ್ಕೆ ತುಂಬಿಸುತ್ತಿದ್ದಾಗ ನಿಷ್ಕಲ್ ರಾಮ ಪ್ರಶ್ನಿಸಿದ್ದು, ಈ ವೇಳೆ ಆರೋಪಿಗಳು ತಲವಾರು ತೋರಿಸಿ ಬೆದರಿಸಿದ್ದಾರೆ. ನಿಷ್ಕಲ್ ಆರೋಪಿಗಳಲ್ಲಿ ಒಬ್ಬನನ್ನು ಹಿಡಿಯಲು ಯತ್ನಿಸಿದಾಗ ಹಲ್ಲೆ ನಡೆಸಿದ್ದಾರೆ. ಎರಡು ಗೋಣಿ ಚೀಲದಲ್ಲಿ ಸುಲಿದಿಟ್ಟ ಅಡಿಕೆಯನ್ನು ಸ್ಕೂಟರಿನಲ್ಲಿಟ್ಟು ಒಬ್ಬಾತ ಪರಾರಿಯಾಗಿದ್ದಾನೆ.
ಇನ್ನೊಬ್ಬ ವ್ಯಕ್ತಿ ಬಶೀರ್ ಎನ್ನುವಾತ ಸುಲಿಯದ ಅಡಿಕೆಯನ್ನು ಎಂಟು ಗೋಣಿ ಚೀಲದಲ್ಲಿ ತುಂಬಿಸಿ ಕಾರಿನಲ್ಲಿ ಹಾಕಿ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಬೊಬ್ಬೆ ಕೇಳಿ ಮನೆಯವರು ಬಂದಿದ್ದು ಬಶೀರ್ ನನ್ನು ಹಿಡಿದು ಕೂಡಿ ಹಾಕಿದ್ದಾರೆ. ವಿಚಾರಣೆ ವೇಳೆ ಪರಾರಿಯಾದ ವ್ಯಕ್ತಿಯನ್ನು ಹಕೀಂ ಎಂದು ಬಶೀರ್ ತಿಳಿಸಿದ್ದಾನೆ. ಸದ್ರಿ ಆರೋಪಿಯನ್ನು ಹಿಡಿದು ಮನೆಯವರೇ ಬೆಳ್ಳಾರೆ ಠಾಣೆಗೆ ಕರೆತಂದಿದ್ದು, ದೂರು ನೀಡಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಆರೋಪಿ ಬಶೀರ್ ಇದೇ ರೀತಿ ಹಲವು ಸಮಯದಿಂದ ಅಡಿಕೆ ಕಳ್ಳತನ ಮಾಡುತ್ತಿರುವುದಾಗಿ ಹೇಳಿದ್ದಾನೆ.
Two arecanut thieves, who arrived in a vehicle to Edapathya farm of Savanoor, swung a sword at the son of the owner as he caught them red handed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm