ಬ್ರೇಕಿಂಗ್ ನ್ಯೂಸ್
28-11-23 01:26 pm HK News Desk ಕ್ರೈಂ
ತಿರುವನಂತಪುರಂ, ನ.28: ಸೋಮವಾರ ಸಂಜೆ ಕೊಲ್ಲಂನ ಒಯೂರ್ ಎಂಬಲ್ಲಿರುವ ತನ್ನ ಮನೆಯಿಂದ ಅಣ್ಣನೊಂದಿಗೆ ಟ್ಯೂಷನ್ ತರಗತಿಗೆ ತೆರಳುತ್ತಿದ್ದ ಬಾಲಕಿಯನ್ನು ನಾಲ್ಕು ಮಂದಿಯ ತಂಡವೊಂದು ಅಪಹರಿಸಿದ ಘಟನೆ ನಡೆದಿದೆ.
ಸಂಜೆ ಸುಮಾರು 4.30ಕ್ಕೆ ಘಟನೆ ನಡೆದಿದ್ದು ಬಾಲಕಿ ಅಬಿಗೆಲ್ ಸಾರಾ ರೇಜಿಳನ್ನು ಅಪಹರಣಕಾರರು ಕಾರಿನೊಳಕ್ಕೆ ಎಳೆದೊಯ್ದಿದ್ದರು. ಆಕೆಯ ಎಂಟು ವರ್ಷದ ಅಣ್ಣನನ್ನೂ ಅಪಹರಿಸುವ ಯತ್ನ ನಡೆಯಿತಾದರೂ ಆತ ತಪ್ಪಿಸಿಕೊಳ್ಳುವಲ್ಲಿ ಸಫಲನಾಗಿದ್ದಾನೆ. ಆತನಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಈ ಘಟನೆ ನಡೆದಾಗ ಮಕ್ಕಳ ಹೆತ್ತವರಾದ ರೇಜಿ ಜಾನ್ ಮತ್ತು ಸಿಜಿ ಜಾನ್ ಮನೆಯಲ್ಲಿರಲಿಲ್ಲ. ಇಬ್ಬರೂ ವೃತ್ತಿಯಲ್ಲಿ ನರ್ಸ್ ಆಗಿದ್ದಾರೆ.
ಘಟನೆ ನಡೆದ ಮೂರು ಗಂಟೆಗಳ ತರುವಾಯ ಬಾಲಕಿಯ ತಾಯಿಗೆ ಮಹಿಳೆಯೊಬ್ಬಳಿಂದ ಫೋನ್ ಕರೆ ಬಂದು ರೂ 5 ಲಕ್ಷಕ್ಕೆ ಬೇಡಿಕೆಯಿರಿಸಲಾಗಿತ್ತು. ಮತ್ತೆ ರಾತ್ರಿ 9.30ಕ್ಕೆ ಬಂದ ಕರೆಯಲ್ಲಿ ರೂ 10 ಲಕ್ಷಕ್ಕೆ ಬೇಡಿಕೆ ಇರಿಸಲಾಗಿತ್ತು. ಮಗು ಸುರಕ್ಷಿತವಾಗಿದೆ ಎಂದೂ ಅಪಹರಣಕಾರರು ಹೇಳಿದ್ದಾರೆನ್ನಲಾಗಿದೆ.
ಅಪಹೃತ ಮಗುವಿಗಾಗಿ ರಾಜ್ಯಾದ್ಯಂತ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಿಳಿ ಬಣ್ಣದ ಕಾರೊಂದು ತಮ್ಮನ್ನು ಕಟ್ಟಾಡಿ ಜಂಕ್ಷನ್ನಲ್ಲಿ ಅಡ್ಡಗಟ್ಟಿತ್ತು ಎಂದು ಬಾಲಕಿಯ ಸೋದರ ಹೇಳಿದ್ದಾನೆ. ಕಳೆದೆರಡು ದಿನಗಳಿಂದ ಬಿಳಿ ಸೆಡಾನ್ ಕಾರು ಆ ಪ್ರದೇಶದಲ್ಲಿ ಸಂಚರಿಸುತ್ತಿತ್ತು ಎಂಬ ಮಾಹಿತಿಯನ್ನು ಸ್ಥಳೀಯರು ಪೊಲೀಸರಿಗೆ ನೀಡಿದ್ದಾರೆ.
ಅಪಹರಣದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತನಿಖೆಯನ್ನು ತೀವ್ರಗೊಳಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅಪಹರಣದ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಪೊಲೀಸರು ಅಪಹರಣವಾದ ಬಾಲಕಿಯ ಪತ್ತೆಗೆ ಪೊಲೀಸರು ತಂಡ ರಚನೆ ಮಾಡಿದ್ದು ಶೀಘ್ರದಲ್ಲಿ ಬಾಲಕಿ ಪತ್ತೆಯಾಗಲಿದೆ, ಯಾರು ಕೂಡ ಸುಳ್ಳು ಸುದ್ದಿಯನ್ನು ಹರಡಿಸಬಾರದು ಎಂದು ಜನರಲ್ಲಿ ವಿನಂತಿಸಿದ್ದಾರೆ.
ಈ ನಡುವೆ ಪೊಲೀಸರಿಗೆ ಮಾಹಿತಿ ನೀಡದಂತೆ ಅಪಹರಣಕಾರರು ಪೋಷಕರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಸದ್ಯ ಪೊಲೀಸರು ಅಪಹರಣವಾದ ಕೆಲವೇ ಹೊತ್ತಿನಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ನಖಾಬಂಧಿ ನಡೆಸಿ ವಾಹನ ತಪಾಸಣೆ ನಡೆಸಿದ್ದಾರೆ ಆದರೆ ಆರೋಪಿಗಳ ಪತ್ತೆ ಮಾತ್ರ ಸಾಧ್ಯವಾಗಲಿಲ್ಲ.
In a shocking incident from Kerala, a six-year-old girl was kidnapped from Kollam by a group of people reportedly travelling in a white sedan on Monday. The incident took place at around 4:30 pm in Pooyappally. The kidnappers later called the mother of the girl demanding a ransom of Rs 10 lakh. Police have launched a state-wide search for the child.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm