ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ


ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm