ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ


ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm