ಬ್ರೇಕಿಂಗ್ ನ್ಯೂಸ್
30-11-23 03:15 pm Bangalore Correspondent ಕ್ರೈಂ
ಬೆಂಗಳೂರು, ನ.30 : ತನ್ನ ಪ್ರಿಯಕರನ ಮೊಬೈಲ್ನಲ್ಲಿ 13 ಸಾವಿರ ಯುವತಿಯರ ನಗ್ನ ಫೋಟೋಗಳನ್ನು ಕಂಡ ಪ್ರೇಯಸಿಯೊಬ್ಬಳು ಶಾಕ್ ಆಗಿದ್ದಾಳೆ. ಈ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಬಿಪಿಓ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ಯುವತಿ, ತನ್ನ ಸಹೋದ್ಯೋಗಿ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಆಗಾಗ್ಗೆ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಅದನ್ನು ಪ್ರಿಯಕರ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದುಕೊಂಡಿದ್ದ. ಅದನ್ನು ಗಮನಿಸಿದ್ದ ಯುವತಿ, ಹುಡುಗ ಶೌಚಾಲಯಕ್ಕೆ ಹೋದಾಗ ಆತನ ಮೊಬೈಲ್ ತೆಗೆದು ತನ್ನ ಫೋಟೊ ಡಿಲೀಟ್ ಮಾಡಲು ಮುಂದಾಗಿದ್ದಳು. ಆಗ ಆತನ ಮೊಬೈಲ್ ನಲ್ಲಿ ಬರೋಬರಿ 13 ಸಾವಿರ ಯುವತಿಯರ ನಗ್ನ ಫೋಟೋಗಳು, ವಿಡಿಯೋಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾಳೆ.
ವಿಪರ್ಯಾಸವೆಂದರೆ ಈ ಪೈಕಿ ತನ್ನದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಹಲವು ಯುವತಿಯರ ಮಾದಕ ಚಿತ್ರಗಳಿದ್ದವು. ಇದನ್ನೆಲ್ಲ ಕಂಡು ಶಾಕ್ ಆದ ಯುವತಿ, ಪ್ರಿಯಕರನ ಜತೆ ಜಗಳ ನಡೆಸಿ ಆತನಿಂದ ದೂರವಾಗಿದ್ದಾಳೆ. ಬಳಿಕ ತನ್ನ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ.
ಅಧಿಕಾರಿ ವರ್ಗ, ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆತ ಮಾತ್ರ ತಾನು ಯಾವ ಯುವತಿಗೂ ತೊಂದರೆ ಕೊಟ್ಟಿಲ್ಲ ಎಂದಿದ್ದಾನೆ. ಇಷ್ಟೊಂದು ಯುವತಿಯರ ಅರೆನಗ್ನ ಫೋಟೋಗಳನ್ನು ಹೇಗೆ ಸಂಗ್ರಹಿಸಿದ್ದಾನೆ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ಯುವತಿಯರ ಫೋಟೊ ತೆಗೆದು ಮಾರ್ಫ್ ಮಾಡಿರುವ ಸಾಧ್ಯೆತೆಯಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಕಂಪನಿ ಅಧಿಕಾರಿಗಳೇ ನ.23ರಂದು ಕೇಂದ್ರ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಳಿಕ ಮಂಗಳೂರು ಮೂಲದ ಆದಿತ್ಯ ಸಂತೋಷ್ ಎಂಬ ಟೆಕ್ಕಿಯನ್ನು ಬಂಧಿಸಿದ್ದಾರೆ. ಹುಡುಗಿಯರ ಫೋಟೊ ಮಾರ್ಫ್ ಮಾಡಿಕೊಂಡು ಈ ರೀತಿ ಸಂಗ್ರಹಿಸಿಟ್ಟಿದ್ದಾಗಿ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
Mangalore based BPO staffer arrested for storing 13000 naked photos and videos of women in Bangalore. The accused BPO staffer, identified as Aditya Santhosh, was arrested by the Bengaluru Cyber Crime police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm