ಬ್ರೇಕಿಂಗ್ ನ್ಯೂಸ್
30-11-23 03:15 pm Bangalore Correspondent ಕ್ರೈಂ
ಬೆಂಗಳೂರು, ನ.30 : ತನ್ನ ಪ್ರಿಯಕರನ ಮೊಬೈಲ್ನಲ್ಲಿ 13 ಸಾವಿರ ಯುವತಿಯರ ನಗ್ನ ಫೋಟೋಗಳನ್ನು ಕಂಡ ಪ್ರೇಯಸಿಯೊಬ್ಬಳು ಶಾಕ್ ಆಗಿದ್ದಾಳೆ. ಈ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಬಿಪಿಓ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ಯುವತಿ, ತನ್ನ ಸಹೋದ್ಯೋಗಿ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಆಗಾಗ್ಗೆ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಅದನ್ನು ಪ್ರಿಯಕರ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದುಕೊಂಡಿದ್ದ. ಅದನ್ನು ಗಮನಿಸಿದ್ದ ಯುವತಿ, ಹುಡುಗ ಶೌಚಾಲಯಕ್ಕೆ ಹೋದಾಗ ಆತನ ಮೊಬೈಲ್ ತೆಗೆದು ತನ್ನ ಫೋಟೊ ಡಿಲೀಟ್ ಮಾಡಲು ಮುಂದಾಗಿದ್ದಳು. ಆಗ ಆತನ ಮೊಬೈಲ್ ನಲ್ಲಿ ಬರೋಬರಿ 13 ಸಾವಿರ ಯುವತಿಯರ ನಗ್ನ ಫೋಟೋಗಳು, ವಿಡಿಯೋಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾಳೆ.
ವಿಪರ್ಯಾಸವೆಂದರೆ ಈ ಪೈಕಿ ತನ್ನದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಹಲವು ಯುವತಿಯರ ಮಾದಕ ಚಿತ್ರಗಳಿದ್ದವು. ಇದನ್ನೆಲ್ಲ ಕಂಡು ಶಾಕ್ ಆದ ಯುವತಿ, ಪ್ರಿಯಕರನ ಜತೆ ಜಗಳ ನಡೆಸಿ ಆತನಿಂದ ದೂರವಾಗಿದ್ದಾಳೆ. ಬಳಿಕ ತನ್ನ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ.
ಅಧಿಕಾರಿ ವರ್ಗ, ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆತ ಮಾತ್ರ ತಾನು ಯಾವ ಯುವತಿಗೂ ತೊಂದರೆ ಕೊಟ್ಟಿಲ್ಲ ಎಂದಿದ್ದಾನೆ. ಇಷ್ಟೊಂದು ಯುವತಿಯರ ಅರೆನಗ್ನ ಫೋಟೋಗಳನ್ನು ಹೇಗೆ ಸಂಗ್ರಹಿಸಿದ್ದಾನೆ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ಯುವತಿಯರ ಫೋಟೊ ತೆಗೆದು ಮಾರ್ಫ್ ಮಾಡಿರುವ ಸಾಧ್ಯೆತೆಯಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಕಂಪನಿ ಅಧಿಕಾರಿಗಳೇ ನ.23ರಂದು ಕೇಂದ್ರ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಳಿಕ ಮಂಗಳೂರು ಮೂಲದ ಆದಿತ್ಯ ಸಂತೋಷ್ ಎಂಬ ಟೆಕ್ಕಿಯನ್ನು ಬಂಧಿಸಿದ್ದಾರೆ. ಹುಡುಗಿಯರ ಫೋಟೊ ಮಾರ್ಫ್ ಮಾಡಿಕೊಂಡು ಈ ರೀತಿ ಸಂಗ್ರಹಿಸಿಟ್ಟಿದ್ದಾಗಿ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
Mangalore based BPO staffer arrested for storing 13000 naked photos and videos of women in Bangalore. The accused BPO staffer, identified as Aditya Santhosh, was arrested by the Bengaluru Cyber Crime police.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm